BlogAccidentCrime newsGovernmentHealthHighlightsHuman storiesLifestyleLocal newsNational NewsObituaryOthersPoliticsState newsTop StoriesTrendingWomen Care

ಕುಂದಾಪುರ: ಹುಟ್ಟೂರು ತಲುಪಿದ ಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರ – ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ ಅಭಿಮಾನಿಗಳು

Aware others:

ಕುಂದಾಪುರ: ಗಡಿ ಕಾಯ್ದ ಯೋಧ ವೀರ ಮರಣವನ್ನಪ್ಪಿ ಪಾರ್ಥೀವವಾಗಿ ತವರಿಗೆ ಆಗಮಿಸುತ್ತಿರುವ ಸಂದರ್ಭ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿರಾರು ಸಂಖ್ಯೆಯಲ್ಲಿ ಅನೂಪ್ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಅನೂಪ್ ಅಂತಿಮ ದರ್ಶನದಲ್ಲಿ ಭಾಗಿಯಾಗಿದ್ದಾರೆ. ಗುರುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೆಕ್ಕಟ್ಟೆಯಿಂದ ಸಿಂಗರಿಸಿದ ಅಂಬ್ಯುಲೆನ್ಸ್ ನಲ್ಲಿ  ಸಾಗಿಬಂದ ಅನೂಪ್ ಪಾರ್ಥಿವ ಶರೀರವನ್ನು ಬುಧವಾರ ತಡರಾತ್ರಿಯಲ್ಲಿ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗಿದ್ದು, ಅಲ್ಲಿಂದ ಉಡುಪಿ ಜಿಲ್ಲಾ ಶೀತಲೀಕರಿಸಿದ ಶವಾಗಾರದಲ್ಲಿ ಇಡಲಾಗಿತ್ತು. ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ ಸೇರಿದಂತೆ ಹಲವಾರು ಗಣ್ಯರು ಮೆರವಣಿಗೆಯಲ್ಲಿ ಸಾಗಿ ಬಂದು, ಅನೂಪ್ ಪೂಜಾರಿಗೆ ಅಂತಿಮ ನಮನ ಸಲ್ಲಿಸಿದರು. ದರು.

ಉಡುಪಿ ಜಿಲ್ಲಾಡಳಿತ, ಕುಂದಾಪುರ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರೀ ಇಲಾಖೆಗಳು ಅನೂಪ್ ಅವರ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿದ್ದಾರೆ. ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆಯುತ್ತಿದ್ದು, ಕುಟುಂಬದ ಆಪ್ತರು ಅನೂಪ್ ಅವರ ಮನೆಯಲ್ಲಿ ಅಂತಿಮ ದರ್ಶನ ಪಡೆದರು. ಇದೀಗ ಅನೂಪ್ ಕಲಿತ ಬೀಜಾಡಿಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.   ಬಳಿಕ ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅಂತ್ಯಸಂಸ್ಕಾರ ನಡೆಯಲಿದೆ. ಸಮುದ್ರ ತೀರದ ಸರ್ಕಾರಿ ಜಮೀನಿನಲ್ಲಿ ಸಿದ್ಧತೆ ಮಾಡಲಾಗಿದ್ದು, ಸಂಜೆಯ ವೇಳೆ ಅನೂಪ್ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಗುವುದು.


Aware others:

One thought on “ಕುಂದಾಪುರ: ಹುಟ್ಟೂರು ತಲುಪಿದ ಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರ – ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ ಅಭಿಮಾನಿಗಳು

  • Reading this felt like finding a long-lost treasure — a piece of writing that enlightens and comforts in equal measure.

    Reply

Leave a Reply

Your email address will not be published. Required fields are marked *

error: Content is protected !!