BlogEconomyGovernmentHealthHighlightsHuman storiesLifestyleLocal newsNational NewsObituaryOthersPoliticsState newsTechTop StoriesTrending

ದೆಹಲಿ: ಆರ್ಥಿಕ ತಜ್ಞರಾಗಿದ್ದ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ – ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಿದ ಸರ್ಕಾರ

Aware others:

ದೆಹಲಿ: ದೇಶ ಕಂಡ ಪ್ರಮುಖ ಆರ್ಥಿಕ ತಜ್ಞರಲ್ಲಿ ಒಬ್ಬರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಯೋಸಹಜ ಅನಾರೋಗ್ಯದಿಂದ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ಎಂಟು ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ಉದಾರೀಕರಣ ಖಾಸಗಿಕರಣ ಜಗತೀಕರಣ ನೀತಿಯಡಿ ಉದ್ಯಮ ಕ್ಷೇತ್ರಕ್ಕೆ ಕಂಟಕವಾಗಿದ್ದ  ಲೈಸೆನ್ಸ್ ರಾಜ್ ರದ್ದು ಗೊಳಿಸುವ ಮೂಲಕ ದೇಶದಲ್ಲಿ ಉದ್ಯಮ ಕ್ಷೇತ್ರಕ್ಕೆ ವಿಫಲ ಅವಕಾಶ ಮಾಡಿಕೊಟ್ಟ ಮಾಜಿ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಮನುಮೋಹನ್ ಸಿಂಗ್ ಕಾಂಗ್ರೆಸ್ ನೇತೃತ್ವದ ಸೋನಿಯಾ ಗಾಂಧಿಯವರ ಇಚ್ಛೆಯಂತೆ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. 

1932 ಸೆಪ್ಟೆಂಬರ್ 26 ರಂದು ಪಶ್ಚಿಮ ಪಂಜಾಬ್ ನಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರು 2004 ರಿಂದ 2014ರ ವರೆಗೆ ಒಟ್ಟು ಎರಡು ಅವಧಿಗೆ ಹತ್ತು ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದರು. 92 ವರ್ಷ ಪ್ರಾಯದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಮೊದಲ ಸಿಖ್ ಪ್ರಧಾನಮಂತ್ರಿ ಎಂಬ ಖ್ಯಾತಿಗಳಿಸಿದ್ದರು. 

ವನಮೋಹನ್ ಸಿಂಗ್ ನಿಧನಕ್ಕೆ ರಾಜ್ಯ ಹಾಗೂ ದೇಶದ ಎಲ್ಲಾ ಗಣ್ಯರು ಸಂತಾಪ ಸೂಚಿಸಿದ್ದಾರೆ ಕರ್ನಾಟಕದಲ್ಲಿ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ ಅಲ್ಲದೆ ಏಳು ದಿನಗಳ ಕಾಲ ಶೋಕಾಚರಣೆ ನಡೆಯಲಿದೆ.


Aware others:

Leave a Reply

Your email address will not be published. Required fields are marked *

error: Content is protected !!