ಆಲೂರು ಕಲ್ಲುಕೋರೆಗೆ ಬಿದ್ದ ವ್ಯಕ್ತಿ ಸಾವು

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿಯೇ ಅತೀ ದೊಡ್ಡ ಕೆಂಪುಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬೈಂದೂರು ತಾಲೂಕಿನ ಆಲೂರು ಗ್ರಾಮದ ಮುಂಡುಗೋಡಿನಲ್ಲಿರುವ ಸರ್ಕಾರಿ ಜಾಗದ ಹಳೆಯ ಕೆಂಪು ಕಲ್ಲು ಕೋರೆಯ ಹೊಂಡಕ್ಕೆ ಬಿದ್ದು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸುನಿಲ್ ಗಟ್ಟಿ (22) ಎಂದು ಗುರುತಿಸಲಾಗಿದೆ.
ಮಂಗಳವಾರವೇ ಘಟನಬೆ ನಡೆದಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯಾಹ್ನ ಸುನಿಲ್ ಗಟ್ಟಿ ಸಾವನ್ನಪ್ಪಿದ್ದಾನೆ. ಆದರೆ ಸುನಿಲ್ ಸಾವಿನ ಹಿಂದೆ ಅನುಮಾನಗಳಿರುವುದಾಗಿ ದೂರುದಾರ ಹನುಮಂತರಾಯ ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.