ನಿವೃತ್ತ ಶಿಕ್ಷಕ ಆತ್ಮಹತ್ಯೆ
ಕುಂದಾಪುರ: ನಿವೃತ್ತ ಶಿಕ್ಷಕಕರೊಬ್ಬರು ತಮ್ಮ ಮನೆಯ ಮೇಲೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಭಾಸಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಶಿಕ್ಷಕರನ್ನು ಮೋಹನ ಮಡಿವಾಳ ಎಂದು ಗುರುತಿಸಲಾಗಿದೆ.
ಮೋಹನ ಮಡಿವಾಳ ಅವರು ಎರಡು ಮದುವೆಯಾಗಿದ್ದರು. ಎರಡನೇ ಪತ್ನಿಯ ಜೊತೆಗೆ ವಾಸವಾಗಿದ್ದರು. ಕುಟುಂಬದೊಳಗಿನ ಕಲಹದಿಂದಾಗಿ ಅವರು ಬೇಸತ್ತಿದ್ದರು ಎನ್ನಲಾಗಿದೆ. ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು ಎಂದು ತಿಳಿದು ಬಂದಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.