ಕುಂದಾಪುರ: ಯುವ ಬಂಟರ ಸಂಘದಿಂದ ಅನಾಥಾಶ್ರಮಕ್ಕೆ ಮೂಲಸೌಲಭ್ಯಗಳ ಕೊಡುಗೆ
ಕುಂದಾಪುರ: ಹಲವಾರು ಸಮಾಜ ಸೇವೆ, ವಿದ್ಯಾರ್ಥಿ ವೇತನ, ಅಸಹಾಯಕರಿಗೆ ನೆರವು ನೀಡುತ್ತಾ ಬಂದಿರುವ ಕುಂದಾಪುರ ತಾಲೂಕು ಯುವ ಬಂಟರ ಸಂಘವು ಇದೀಗ ಅನಾಥಾಶ್ರಮಕ್ಕೆ ಮೂಲ ಸೌಲಭ್ಯಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಉಡುಪಿಯ ಕೊಳಲಗಿರಿ ಸಮೀಪ ಇರುವ ಹೋಂ ಡಾಕ್ಟರ್ ಫೌಂಡೇಶನ್ನ ಆಡಳಿತಕ್ಕೂಳಪಟ್ಟ ಸ್ವರ್ಗ ಅಸಹಾಯಕರ ಅರಮನೆ ಅನಾಥಾಶ್ರಮಕ್ಕೆ 35000 ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ ವಾಟರ್ ಫಿಲ್ಟರ್ ಹಾಗೂ ಆಶ್ರಮಕ್ಕೆ ಬೇಕಾದ 10000 ಮೌಲ್ಯದ ದಿನಬಳಕೆಯ ವಸ್ತುಗಳನ್ನು ಸಂಘದ ವತಿಯಿಂದ ಸಂಘದ ಗೌರವಾಧ್ಯಕ್ಷೆ ವತ್ಸಲಾ ದಯಾನಂದ ಶೆಟ್ಟಿ ಅವರು ಹೋಮ್ ಡಾಕ್ಟರ್ ಫೌಂಡೇಶನ್ ನ ಆಡಳಿತ ನಿರ್ದೇಶಕ ಡಾ. ಶಶಿಕಿರಣ್ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ನಿಮಿತ ಶೆಟ್ಟಿ ಮತ್ತು ಸ್ವರ್ಗ ಆಶ್ರಮದ ಸಿಬ್ಬಂದಿಗಳು ಉಪಸ್ಥಿತರಿದ್ದರು.