BlogCrime newsGovernmentHighlightsLifestyleLocal newsOthersState newsTop StoriesTrending

ಹೆಚ್ಚುತ್ತಿರುವ ಗೋ ಅವಶೇಷ – ಹಂತಕರ ಬಂಧನಕ್ಕೆ ಶಾಸಕ ಗಂಟಿಹೊಳೆ ಗಡುವು

Aware others:

ಕುಂದಾಪುರ: ಕಳೆದ ಕೆಲವು ತಿಂಗಳುಗಳಿಂದ ಅಲ್ಲಲ್ಲಿ ಪತ್ತೆಯಾಗುತ್ತಿರುವ ಗೋ ಅವಶೇಷಗಳು ಹಾಗೂ ಗೋ ಕಳವು ಪ್ರಕರಣಗಳು ಕರಾವಳಿಯಲ್ಲಿ ಆತಂಕ ಸೃಷ್ಟಿಸುತ್ತಿರುವುದು ಸುಳ್ಳಲ್ಲ. ಈ ಪ್ರಕರಣಗಳು ಮುಂದಿನ ದಿನಗಳಲ್ಲಿ ಕೋಮು ಪ್ರಚೋದನೆಗಳಿಗೆ ಕಾರಣವಾದರೂ ಆಶ್ಚರ್ಯವಿಲ್ಲ ಎನ್ನುವ ಸ್ಥಿತಿ ಸಧ್ಯ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಂಡು ಬರುತ್ತಿದೆ.

ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಜಡ್ಕಲ್ ಸಮೀಪದ ಕಾನ್ಕಿಯ ನಡುರಸ್ತೆಯಲ್ಲಿ ಗೋವಿನ ರುಂಡ ಪತ್ತೆಯಾಗಿದ್ದು ಮತ್ತೆ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ವಿಶೇಷವೆಂದರೆ ಮುಸ್ಲಿಂ ಸಮುದಾಯವೇ ಇಲ್ಲದಂತಿರುವ ಈ ಪ್ರದೇಶದಲ್ಲಿ ಗೋ ಅವಶೇಷಗಳನ್ನು ಚೆಲ್ಲಿ ಹೋದವರು ಯಾರು ಎನ್ನುವ ಪ್ರಶ್ನೆಗಳಿಗೆ ಉತ್ತರವೂ ನಿಗೂಢವಾಗಿದೆ. ಆದರೆ ದನದ ರುಂಡ ಮತ್ತು ಅಂಗಾಂಗಗಳನ್ನು ಎಸೆದು ಹೋಗಿರುವುದು ಅಥವಾ ಸಾಗಿಸುತ್ತಿದ್ದ ವೇಳೆ ರಸ್ತೆಯಲ್ಲಿ ಬಿದ್ದು ಹೋಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಗೋವಿನ ರುಂಡ ಪತ್ತೆಯಾದ ಸ್ಥಳಕ್ಕೆ ತಡರಾತ್ರಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ದೌಡಾಯಿಸಿದ್ದಾರೆ. ಸಹಜವಾಗಿಯೇ ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದ ಶಾಸಕರು, ಗೋ ಹಂತಕರನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಕ್ರಮ ಕೈಗೊಳ್ಳದಂತೆ ಕಟ್ಟಿ ಹಾಕುವ ಮೂಲಕ ಗೋ ಹಂತಕರ ಬೆನ್ನಹಿಂದೆ ನಿಂತು ಪೋಷಿಸುತ್ತಿದೆ ಎಂದೂ ಆರೋಪಿಸಿದ್ದಾರೆ.

ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿದ್ದರೂ ಬೈಂದೂರಿನ ನಾನಾ ಭಾಗಗಳಲ್ಲಿ ಗೋ-ಹತ್ಯೆ ನಡೆಸಿ ಗೋವಿನ ಅಂಗಾಂಗಳನ್ನು ಬೀದಿಯಲ್ಲಿ ಎಸೆದು ಶಾಂತಿಭಂಗ ಮಾಡುತ್ತಿದ್ದಾರೆ. ಅವ್ಯಾಹತ ಗೋ ಕಳ್ಳತನ, ಗೋಹತ್ಯೆಯ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಮತಾಂಧರನ್ನು ಹೆಡೆಮುರಿ ಕಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ಹಿಂದೂ ಸಮಾಜ ತಿರುಗಿ ಬೀಳುವ ಮುನ್ನ ಗೋ ಹಂತಕರನ್ನು ಬಂಧಿಸಬೇಕು ಎನ್ನುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!