BlogGovernmentHighlightsLifestyleLocal newsOthersPolitics

ಕುಂದಾಪುರ: ಕಾಮಗಾರಿ ಪ್ರಗತಿ ಪರಿಶೀಲನೆ – ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಶಾಸಕ ಎ.ಕಿರಣ್ ಕೊಡ್ಗಿ

Aware others:

ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ 2023- 24 ಮತ್ತು 2024 25 ನೇ ಸಾಲಿನ ಎಲ್ಲಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಕುಂದಾಪುರ ತಾಲ್ಲೂಕು ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯಲ್ಲಿ ಕುಂದಾಪುರ ಶಾಸಕ ಎ.ಕಿರಣ್ ಕೊಡ್ಗಿ ನೇತೃತ್ವದಲ್ಲಿ ಸೋಮವಾರ ನಡೆಯಿತು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಕುಂದಾಪುರ ಹೋಬಳಿ ವ್ಯಾಪ್ತಿ ಹಾಗೂ ಕೋಟ ಹೋಬಳಿ ಮತ್ತು ಹೆಬ್ರಿ ಹೋಬಳಿಯ ಬೆಳ್ವೆ ಮತ್ತು ಮಡಾಮಕ್ಕಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ   ಶಾಸಕರ ನಿಧಿ, ಟಾಸ್ಕ್ ಫೋರ್ಸ್, ಪ್ರವಾಹ ಹಾನಿ, 3054 ಮುಖ್ಯಮಂತ್ರಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಜಿಲ್ಲಾ ಪಂಚಾಯತ್ ಕಾಮಗಾರಿ ಕಿಂಡಿ ಅಣೆಕಟ್ಟು ನಿರ್ವಹಣೆ, ತಾಲೂಕ್ ಪಂಚಾಯತ್ ಕಾಮಗಾರಿಗಳು ಇತರೆ ಎಲ್ಲಾ ಯೋಜನೆಯನ್ನು ಪರಿಶೀಲನೆ ನಡೆಸಿದರು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಪ್ರಸ್ತುತ ಸಾಲಿನ ಅವಧಿಯಲ್ಲಿ ಶೀಘ್ರವಾಗಿ ಮುಗಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ರವಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಜಕುಮಾರ್, ಶ್ರೀನಾಥ್, ಮನೋಹರ್ ಪಾಟೀಲ್, ಹಾಗೂ ಕಿರಿಯ ಇಂಜಿನಿಯರ್ ರವರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!