ಬ್ರಹ್ಮಾವರದ ಇಂಜಿನಿಯರ್ ಗಂಗಾವತಿಯಲ್ಲಿ ಆತ್ಮಹತ್ಯೆ
ಕುಂದಾಪುರ: ದೇವಾಲಯಗಳ ವಿನ್ಯಾಸ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದ ಖ್ಯಾತ ಸಿವಿಲ್ ಇಂಜಿನಿಯರ್, ಎಂ.ಕೆ. ಟೆಂಪಲ್ ಕನ್ಸ್ಟ್ರಕ್ಷನ್’ ಸಂಸ್ಥೆಯ ಮಾಲೀಕ, ಮೂಲತಃ ಬ್ರಹ್ಮಾವರದ ನಿವಾಸಿ ವಿನಯ್ ಕುಮಾರ್ (38) ಕೊಪ್ಪಳದ ಗಂಗಾವತಿಯ ತನ್ನ ಬಾಡಿಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿನಯ್ ಕುಮಾರ್ ಉಡುಪಿ ಜಿಲ್ಲೆಯ ಬ್ರಹ್ಮಾವರದ ನಿವಾಸಿ. ಅವರು ‘ರಾಗಿದ್ದು, ದೇಶದಾದ್ಯಂತ ಗ್ರಾನೈಟ್, ಅಮೃತಶಿಲೆ ಹಾಗೂ ಸ್ಥಳೀಯ ಕಚ್ಚಾ ಸಾಮಗ್ರಿಗಳನ್ನು ಬಳಸಿ ವಿಶಿಷ್ಟ ಶೈಲಿಯ ದೇಗುಲಗಳನ್ನು ನಿರ್ಮಿಸುವುದರಲ್ಲಿ ಪ್ರಸಿದ್ಧರಾಗಿದ್ದರು. ಕೊಟ್ಟೂರು ಬಸವೇಶ್ವರ ದೇವಸ್ಥಾನ, ಗಂಗಾವತಿಯ ಕನಕಗಿರಿ ರಸ್ತೆಯ ಬೀರಲಿಂಗೇಶ್ವರ ದೇವಾಲಯ ಸೇರಿದಂತೆ ಹಲವು ಧಾರ್ಮಿಕ ಕಟ್ಟಡಗಳ ನಿರ್ಮಾಣ ಮಾಡಿದ್ದರು.
ಗ್ರಾನೈಟ್, ಅಮೃತ ಶಿಲೆ ಸೇರಿದಂತೆ ಸ್ಥಳೀಯವಾಗಿ ಲಭ್ಯವಾಗುವ ಕಚ್ಚಾ ಸಾಮಗ್ರಿ, ಶಿಲೆಗಳನ್ನು ಬಳಸಿಕೊಂಡು ಅತ್ಯಾಕರ್ಷಕ ಶೈಲಿಯಲ್ಲಿ ದೇವಾಲಯಗಳನ್ನು ನಿರ್ಮಿಸುತ್ತಿದ್ದರು. ಗಂಗಾವತಿಯ ನ್ಯಾಯಾಲಯದ ಮುಂದಿರುವ ಕೊಟ್ಟೂರು ಬಸವೇಶ್ವರ ದೇವಸ್ಥಾನ, ಕನಕಗಿರಿ ರಸ್ತೆಯಲ್ಲಿರುವ ಹಾಲುಮತ ಸಮಾಜದ ಬೀರಲಿಂಗೇಶ್ವರ ದೇಗುಲ, ಕಿಂದಿಕ್ಯಾಂಪಿನಲ್ಲಿರುವ ರಾಮ ದೇಗುಲಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿದ್ದರು. ಗಂಗಾವತಿ ತಾಲೂಕಿನ ಕೋಟಯ್ಯ ಕ್ಯಾಂಪಿನಲ್ಲಿ ಕೋಟ್ಯಂತರ ರೂಪಾಯಿ ಮೊತ್ತದಲ್ಲಿ ಶ್ರೀರಾಮ ದೇವರ ದೇವಸ್ಥಾನ ನಿರ್ಮಾಣ ಮಾಡಿದ್ದರು. ಇದೇ ಫೆಬ್ರವರಿ 26ರಿಂದ ದೇಗುಲ ಆರಂಭೋತ್ಸವದ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಗಂಗಾವತಿಯ ಕನಕಗಿರಿ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಿನಯ್ ಕುಮಾರ್ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.