BlogCulturalEntertainmentFashionHuman storiesLifestyleLocal newsOthersState newsSuccess storiesTechTop StoriesTrending

ಕುಂದಾಪುರ: ಔದ್ಯಮಿಕ ಕ್ಷೇತ್ರದ ಸಾಧಕ ಉದ್ಯಮಿ ಎಸ್.ಎಸ್. ಹೆಗ್ಡೆಗೆ ತಾಲೂಕು ಯುವ ಬಂಟರ ಸಂಘದಿಂದ ಸನ್ಮಾನ

Aware others:

ಕುಂದಾಪುರ:  ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ ಪಡೆದುಕೊಂಡಿರುವ ಬೆಂಗಳೂರಿನ ಪ್ರತಿಷ್ಟಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮಾಲಕ  ಕುಂದಾಪುರ ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕ. ದಾನಿ, ಉದ್ಯಮಿ ಎಸ್.ಎಸ್. ಹೆಗ್ಡೆಯವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅವರ  ಸ್ವಗ್ರಹದಲ್ಲಿ ಫೆಬ್ರವರಿ 24 ರಂದು ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ ತವರೂರು ಕುಂದಾಪುರಕ್ಕೆ ಆಗಮಿಸಿದ ಸಂದರ್ಭ ಅವರನ್ನು ಯುವ ಬಂಟರ ಸಂಘದ ವತಿಯಿಂದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷೆ ವತ್ಸಲಾ ದಯಾನಂದ ಶೆಟ್ಟಿಯವರು ಸನ್ಮಾನಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಎಸ್ ಎಸ್ ಹೆಗ್ಡೆ ಯವರು ಬಂಟ ಸಮಾಜದ ಬಹುದೊಡ್ಡ ಆಸ್ತಿ ಎಂದರು. ಈ ಸಂದರ್ಭದಲ್ಲಿ  ವಸಂತಿ ಮಂಜಯ್ಯ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿಧರ ಶೆಟ್ಟಿ ಹುಯ್ಯಾರು, ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುಕುಮಾರ್ ಶೆಟ್ಟಿ ಹೇರಿಕುದ್ರು, ರಾಜೇಶ್ ಶೆಟ್ಟಿ ವಕ್ವಾಡಿ, ಸತೀಶ್ ಶೆಟ್ಟಿ ಹೆಸ್ಕತ್ತೂರು ಮೊದಲಾದವರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ  ಡಾ ಚೇತನ್ ಕುಮಾರ್ ಶೆಟ್ಟಿ ಕೋವಾಡಿ ಅಭಿನಂದನಾ ಮಾತುಗಳನ್ನಾಡಿದರು. ದಶಮ ಸಂಭ್ರಮದ ಕೋಶಾಧಿಕಾರಿ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!