BlogCrime newsEducationHighlightsLifestyleLocal newsOthersTop StoriesTrendingWomen Care

ಕಾಲೇಜು ವಿದ್ಯಾರ್ಥಿನಿಯ 10 ಗ್ರಾಮ್ ಸರ ಎಗರಿಸಿ ಪರಾರಿ!

Aware others:

ಕುಂದಾಪುರ; ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ಸೋಮವಾರ ಸಂಜೆ 6 ಗಂಟೆಯ ಹೊತ್ತಿಗೆ ನಡೆದಿದೆ.

ದೀಕ್ಷಾ ಎಂಬ ವಿದ್ಯಾರ್ಥಿನಿ ಕುಂದಾಪುರ ಕಾಲೇಜಿನಿಂದ ಕರಿಕಟ್ಟೆ ಕ್ರಾಸ್ ಬಳಿ ಬಸ್‌ ಇಳಿದು ಅಳ್ವೆಗದ್ದೆ ರಸ್ತೆಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮೋಟಾ‌ರ್ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ವಿದ್ಯಾರ್ಥಿನಿಯ ಕುತ್ತಿಗೆಯಲ್ಲಿದ್ದ 10 ಗ್ರಾಂ ತೂಕದ ಸುಮಾರು 81 ಸಾವಿರ ಮೌಲ್ಯದ ಚಿನ್ನದ ಸರ ಅಪಹರಿಸಿ ಪರಾರಿಯಾಗಿದ್ದಾರೆ. ಸಂಜೆಯ ಹೊತ್ತಿಗೆ ಈ ರೀತಿಯ ಕಳ್ಳತನ ನಡೆದಿರುವುದು ಸಾರ್ವಜನಿಕರಿಗೆ ಆತಂಕ ಉಂಟು ಮಾಡಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!