ಕಾಂಗ್ರೆಸ್ ಕಾರ್ಯಕರ್ತೆ ಶವ ಸೂಟ್ ಕೇಸ್ ನಲ್ಲಿ ಪತ್ತೆ!
ವಾಸ್ತವ ಸುದ್ದಿ: ಕಾಂಗ್ರೆಸ್ ಯುವ ಕಾರ್ಯಕರ್ತೆ, ಹರಿಯಾಣದ ಹಿಮಾನಿ ನರ್ವಾಲ್ (22) ಅವರ ಶವ ಮುಚ್ಚಿದ ಸೂಟ್ ಕೇಸ್ ಒಳಗೆ ಪತ್ತೆಯಾಗಿದೆ.

ಹರಿಯಾಣದ ರೋಹ್ಟಕ್ ಜಿಲ್ಲೆಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್ ಕೇಸ್ ಇರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಸೂಟ್ ಕೇಸ್ ತೆಗೆದು ನೋಡಿದಾಗ ಶವ ಪತ್ತೆಯಾಗಿದ್ದು, ಅದು ಕಾಂಗ್ರೆಸ್ ಕಾರ್ಯಕರ್ತೆಹಿಮಾನಿ ನರ್ವಾಲ್ ರದ್ದು ಎಂದು ತಿಳಿದುಬಂದಿದೆ.
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಹಿಮಾನಿ ನರ್ವಾಲ್ ಕಾಣಿಸಿಕೊಂಡಿದ್ದರು. ಹಿಮಾನಿ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ಶಾಸಕರು ಎಸ್ ಐಟಿ ರಚನೆ ಮಾಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.