BlogEconomyEducationGovernmentHealthHighlightsHuman storiesLifestyleLocal newsOthersPoliticsState newsSuccess storiesTop StoriesTrendingWomen Care

ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಅಂಜಲಿ ಆಸ್ಪತ್ರೆಯಲ್ಲಿ  ತುರ್ತು  ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ

Aware others:

ಬೈಂದೂರು: ಸರ್ಕಾರದ ಆರೋಗ್ಯ ಇಲಾಖೆಗಳ ನಿಯಮಗಳ ನಿರ್ಬಂಧನೆಗಳು ಗ್ರಾಮೀಣ ಭಾಗದ ಆರೋಗ್ಯ ಸಮಸ್ಯೆಗಳು ಇದೆಲ್ಲದರ ಪರಿಣಾಮವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಭಾಗಗಳಲ್ಲಿ ಇರುವ ಹಲವಾರು ಡಯಾಲಿಸಿಸ್ ಬಡ ರೋಗಿಗಳಿಗೆ ಬೈಂದೂರು ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ತುರ್ತು ಚಿಕಿತ್ಸೆ ಮತ್ತು ವಿಶೇಷ ಆರೋಗ್ಯ ಸೇವೆಗಳ ಆರಂಭದ ಮೂಲಕ ನಿಟ್ಟುಸಿರು ಬಿಡುವಂತಾಗಿದೆ ಎಂದು ಸಮೃದ್ಧ ಬೈಂದೂರು ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಿ ಎಸ್ ಸುರೇಶ ಶೆಟ್ಟಿ ಹೇಳಿದ್ದಾರೆ. ಶನಿವಾರ ಅಂಜಲಿ ಆಸ್ಪತ್ರೆಯಲ್ಲಿ ಹೊಸ ಅರೋಗ್ಯ ಸೇವೆಗಳನ್ನು ಉದ್ಘಾಟಿಸಿದ ಸಂದರ್ಭ ಅವರು ಮಾತನಾಡಿದರು.

ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿ, ಹೊಸ ಆರೋಗ್ಯ ಸೇವೆಗಳಿಂದ ವಂಚಿತವಾಗಿರುವ ಪ್ರದೇಶಗಳಿಗೆ ವೈದ್ಯಕೀಯ ಪ್ರವೇಶವನ್ನು ವಿಸ್ತರಿಸುವ ಮಹತ್ವವನ್ನು ಒತ್ತಿ ಹೇಳಿದರು. ಅಂಜಲಿ ಆಸ್ಪತ್ರೆಯ ಮುಖ್ಯಸ್ಥ ಡಾ. ಅಣ್ಣಪ್ಪ ಶೆಟ್ಟಿ, ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಇದೇ ಸಂದರ್ಭ ಹೊಸ ಸೇವೆಗಳಿಗೆ ಕೈಜೋಡಿಸಿದ ದಾನಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ನಾಕಟ್ಟೆ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಈ ಹೊಸ ಸೌಲಭ್ಯವು ಜೀವಗಳನ್ನು ಉಳಿಸುವಲ್ಲಿ ಮತ್ತು ಅಗತ್ಯ ತುರ್ತು ಸೇವೆಗಳನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದರು.

ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ಗ್ರಾಮೀಣ ಭಾಗದಲ್ಲಿರುವ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಅದಕ್ಕೆ ದಾನಿಗಳೂ ಕೈ ಜೋಡಿಸಬೇಕು ಎಂದರು.

ಮಾಹೆ ಬೋಧನಾ ಆಸ್ಪತ್ರೆಯ ಸಿಒಒ ಡಾ. ಆನಂದ್ ವೇಣುಗೋಪಾಲ್,  ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಕೊಲ್ಲೂರು ದೇವಳದ ಆಡಳಿತ ವ್ಯವಸ್ಥಾಪಕ ಬಾಬು ಶೆಟ್ಟಿ, ಡಿಹೆಚ್ಒ ಡಾ. ನಾಗಭೂಷಣ ಉಡುಪ, ಡಾ. ಟಿಎಚ್ಒ ಡಾ. ಪ್ರೇಮಾನಂದ ಮೊದಲಾದವರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!