ಕುಂದಾಪುರ: ವಡೇರಹೋಬಳಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡ ಅಭಿಯಾನ
ಕುಂದಾಪುರ: ಇಲ್ಲಿನ ವಡೇರಹೋಬಳಿ ಪಿಎಂಶ್ರೀ ಸಹಿಪ್ರಾ ಶಾಲೆಯಲ್ಲಿ ಗುರುವಾರ ಸ್ವಚ್ಛತಾ ಪಕ್ವಾಡಾ ಕಾರ್ಯಕ್ರಮ ನಡೆಯಿತು. ಕುಂದಾಪುರದ ಆರೋಗ್ಯ ನಿರೀಕ್ಷಕಿ ನಿವೇದಿತಾ ಹಾಗೂ ತಾಲೂಕು ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಾಧಿಕಾರಿ ತಾರಾ ಗೋವಿಂದ ಭಂಡಾರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕೈಗಳ ಸ್ವಚ್ಛತೆಯ ಕಾಪಾಡುವ ಕುರಿತು ಪ್ರಾತ್ಯಕ್ಷಿತೆ ಮತ್ತು ಪರಿಸರ ಸ್ವಚ್ಛತೆಯ ಕುರಿತು ಮಾಹಿತಿ ನೀಡಿದರು.





ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಪರಿಸರ ಸ್ವಚ್ಛತೆಗೆ ಸಂಬಂಧಪಟ್ಟ ಹಾಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಪರಿಸರ ಸ್ವಚ್ಛತೆಯ ಕುರಿತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸುಧಾಕರ್, ಉಪಾಧ್ಯಕ್ಷರು, ಹಾಗೂ ಸದಸ್ಯರು, ಶಾಲಾ ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕ ವೃಂದದವರಿಂದ ಜಾಗೃತಿ ಜಾಥಾ ನಡೆಸಲಾಯಿತು.





ಮುಖ್ಯೋಪಾಧ್ಯಾಯಿನಿ ಸರಸ್ವತಿ ಸ್ವಾಗತಿಸಿದರು. ಶಿಕ್ಷಕಿಯರಾದ ಸುಜಾತಾ ಬಹುಮಾನದ ಪಟ್ಟಿ ವಾಚಿಸಿದರೆ ಮಂಜುಳಾ ವಂದಿಸಿದರು. ಸಹ ಶಿಕ್ಷಕಿ ಸುಮಿತ್ರ ನಿರೂಪಿಸಿದರು.