BlogEconomyFashionGovernmentHealthHighlightsHuman storiesLifestyleLocal newsNatureObituaryOthersReligion

ಇನ್ಮುಂದೆ ತೀರ್ಥ ಕ್ಷೇತ್ರಗಳಲ್ಲಿ ಸೋಪು-ಶಾಂಪು ಬಳಸುವಂತೆಯೂ ಇಲ್ಲ ಮಾರುವಂತೆಯೂ ಇಲ್ಲ! ಅರಣ್ಯ ಇಲಾಖೆ ಆದೇಶ

Aware others:

ಕುಂದಾಪುರ: ಕರ್ನಾಟಕದ ಎಲ್ಲ ತೀರ್ಥ ಕ್ಷೇತ್ರಗಳ ನದಿ ತೀರಗಳಲ್ಲಿ ಶಾಂಪು ಹಾಗೂ ಸೋಪುಗಳ ಮಾರಾಟವನ್ನು  ಅರಣ್ಯ ಮತ್ತು ಪರಿಸರ ಇಲಾಖೆ ನಿಷೇಧಿಸಿ ಆದೇಶ ಹೊರಡಿಸಿದೆ. ಸೋಪು, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ನದಿ ದಡಗಳಲ್ಲಿ‌ ಸೋಪು, ಶಾಂಪು‌ ಮಾರಾಟ ಹಾಗೂ ಬಳಕೆ ಮಾಡುವಂತಿಲ್ಲ. ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜನೆ ಮಾಡುವಂತಿಲ್ಲ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಅರಣ್ಯ ಇಲಾಖೆ ಆದೇಶದಲ್ಲೇನಿದೆ?: ‘ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ನದಿ ತೀರ, ಕಲ್ಯಾಣಿ ಹಾಗೂ ಸ್ನಾನಘಟ್ಟಗಳಲ್ಲಿ ಭಕ್ತರು ಶ್ಯಾಂಪು, ನೋಪು ಬಳಸಿ ಸ್ನಾನ ಮಾಡಿ, ಉಳಿದ ಸಾಬೂನಿನ ತುಂಡು ಮತ್ತು ಶ್ಯಾಂಪು ಪ್ಯಾಕೇಟ್​ಗಳನ್ನು ಅಲ್ಲಿಯೇ ಬಿಟ್ಟು ಹೋಗುತ್ತಿರುವುದರಿಂದ ನದಿ, ಕೊಳ, ಸರೋವರಗಳಲ್ಲಿ ನೊರೆ ಉಕ್ಕುವುದು, ನೀರು ಕಲುಷಿತವಾಗುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿ ಧರ್ಮಸ್ಥಳ, ಕೊಲ್ಲೂರು, ಶೃಂಗೇರಿ, ಕುಕ್ಕೆ ಸುಬ್ರಹ್ಮಣ್ಯದಂತ ಅನೇಕ ಕ್ಷೇತ್ರಗಳಿಗೆ ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ, ಧರ್ಮಸ್ಥಳದ ನೇತ್ರಾವತಿ ಸೇರಿ ರಾಜ್ಯದ ಅನೇಕ ದೇಗುಲ, ಪುಣ್ಯ ಕ್ಷೇತ್ರಗಳ ನದಿಗಳಲ್ಲಿ ಪುಣ್ಯಸ್ನಾನ ಮಾಡುತ್ತಾರೆ. ಈ ಸಂದರ್ಭದಲ್ಲಿ ಸೋಪು, ಶಾಂಪು ಬಳಕೆಯಿಂದ ಪರಿಸರಕ್ಕೆ ಹಾನಿಯಾಗಬಾರದು ಎಂಬ ಕಾರಣ ಅರಣ್ಯ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ. ಆದರೆ ಇಲಾಖೆಯ ಆದೇಶಗಳನ್ನು ಭಕ್ತರು ಎಷ್ಟರ ಮಟ್ಟಿಗೆ ಪಾಲಿಸುತ್ತಾರೆ ಮತ್ತು ಸರ್ಕಾರ ತನ್ನ ಆದೇಶವನ್ನು ಹೇಗೆ ಅನುಷ್ಟಾನಗೊಳಿಸುತ್ತದೆ ಎನ್ನುವುದು ಮುಂದೆ ನೋಡಬೇಕಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!