BlogCulturalEconomyEducationEntertainmentFashionHighlightsHuman storiesLifestyleLocal newsWomen Care

ಕೋಟ-ಪಂಚವರ್ಣದಿಂದ ವಿಶ್ವ ಮಹಿಳಾ ದಿನಾಚರಣೆ , ಪ್ರೇಮ.ಎಸ್.ಶೆಟ್ಟಿ ಸಾಧಕ ಮಹಿಳೆ ಪುರಸ್ಕಾರ ಪ್ರದಾನ

Aware others:

ಕೋಟ: ಮಹಿಳೆಯನ್ನು ಪೂಜನೀಯ ಸ್ಥಾನದಲ್ಲಿ ನೋಡುವ ಮನಸ್ಥಿತಿ ಇರುತ್ತದೆಯೋ ಅಲ್ಲಿ ದೇವತೆಗಳು ನೆಲೆಯಾಗಿರುತ್ತದೆ ಎಂಬ ವಿಚಾರ ಈ ಭರತ ಭೂಮಿಯ ಪರಂಪರೆಯಲ್ಲಿದೆ, ಹೆಣ್ಣನ್ನು ಗೌರವಿಸುವ ಮನಸ್ಥಿತಿ ನಮ್ಮ ಅಕ್ಕಪಕ್ಕದಲ್ಲಿದ್ದಾಗ ಆಕೆ ಸದೃಢವಾಗಿ ಬೆಳೆಯಲು ಸಾಧ್ಯ ಎಂದು ಬೀಜಾಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು.

ಭಾನುವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪಂಚವರ್ಣ ಯುವಕ ಮಂಡದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಭಾಗಿತ್ವದಡಿ ವಿಶ್ವಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನಿಸಿ ಮಾತನಾಡಿದರು.


ಇದೇ ವೇಳೆ ಮಹಿಳಾ ಸಾಧಕಿ ಪ್ರೇಮ ಎಸ್ ಶೆಟ್ಟಿ ಇವರಿಗೆ ಪಂಚವರ್ಣ ಸಾಧಕ ಮಹಿಳಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಉದ್ಘಾಟಿಸಿದರು.  ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಉಪಸ್ಥಿತರಿದ್ದರು.

ಕಾರ್ಯಾಧ್ಯಕ್ಷೆ ಕಕಲಾವತಿ ಅಶೋಕ್ ಸ್ವಾಗತಿಸಿದರು. ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿಷ್ಣುಮೂರ್ತಿ ಮಯ್ಯ ಪ್ರಾಸ್ತಾವಿಸಿದರು. ಪಂಚವರ್ಣಮಹಿಳಾ ಮಂಡಲದ ಸಂಚಾಲಕಿ ಸುಜಾತ ಎಂ ಬಾಯರಿ ನಿರೂಪಿಸಿ,ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು. ಪಂಚವರ್ಣ ಸಲಹಾ ಸಮಿತಿಯ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!