ಹೈ ಶುಗರ್ – ಯುವಕ ಸೂಸೈಡ್
ಕುಂದಾಪುರ: 35 ವರ್ಷದ ಯುವಕನೊಬ್ಬನಿಗೆ ಹೈ ಶುಗರ್ ಬಂದಿರುವ ಬಗ್ಗೆ ತಿಳಿದು ಮಾನಸಿಕವಾಗಿ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ವ್ಯಾಪ್ತಿಯ ಕುಳುಂಜೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ರಾಜೇಶ್ (35) ಆತ್ಮಹತ್ಯೆ ಮಾಡಿಕೊಂಡವನು.
ಕೃಷಿ ಕೆಲಸ ಮಾಡಿಕೊಂಡಿದ್ದ ರಾಜೇಶ್ ಗೆ ಹೈ ಶುಗರ್ ಇರುವ ಬಗ್ಗೆ ಗೊತ್ತಾದ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಮನೆಯ ಬಲ ಬದಿಯಲ್ಲಿರುವ ಹಾಡಿಯಲ್ಲಿರುವ ಗೇರು ಮರಕ್ಕೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.