BlogCrime newsGovernmentHuman storiesLifestyleLocal newsOthersTechTop StoriesTrendingWomen Care

ಕುಂದಾಪುರ: ಮಹಿಳೆಯ ಕರಿಮಣಿ ಸರ ಅಪಹರಣ – ನಲವತ್ತೆಂಟು ಗಂಟೆಯೊಳಗೆ ಆರೋಪಿ ಬಂಧನ

Aware others:

ಕುಂದಾಪುರ: ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಸಾಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಸಿದ ಘಟನೆ ನಡೆದು ನಲವತ್ತೆಂಟು ಗಂಟೆಯೊಳಗೆ ಆರೆಸ್ಟ್ ಆಗಿದ್ದಾನೆ. ಮಾ. 20ರಂದು ಯಡ್ತಾಡಿಯಲ್ಲಿ ಘಟನೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಾ. 21ರಂದು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.

ಸಾಲಿಗ್ರಾಮ ಕಾರ್ಕಡ ಭಟ್ರಕಟ್ಟೆ ನಿವಾಸಿ ಮಂಜುನಾಥ ಮಯ್ಯ ಕರಿಮಣಿ ಕದ್ದ ಆರೋಪಿ. ಗುರುವಾರ ಯಡ್ತಾಡಿ ನಿವಾಸಿ ಸೀತಾ ಬಾಯಿ ಅವರು ಪಕ್ಕದ ಮನೆಯ ಕಾರ್ಯಕ್ರಮಕ್ಕೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅಲ್ತಾರು ಪಡುಮನೆ ಸಮೀಪ ಯಡ್ತಾಡಿ ಕಡೆಯಿಂದ ಬೈಕ್‌ನಲ್ಲಿ ಬಂದ ಆರೋಪಿ  ಮಂಜುನಾಥ ಮಯ್ಯ28 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಮಂದಾರ್ತಿ ಕಡೆಗೆ ಪರಾರಿಯಾಗಿದ್ದ.

ಕೂಡಲೇ ಸ್ಥಳೀಯರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸುಮಾರು 20 ಕಿ.ಮೀ. ವ್ಯಾಪ್ತಿಯ ವಿವಿಧ ಕಡೆಗಳ ಸಿ.ಸಿ. ಕೆಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಬಾರ್ಕೂರು ಚೌಳಿಕೆರೆ ಸಮೀಪ ವೃದ್ಧೆಯೊಬ್ಬರ ಕುತ್ತಿಗೆಯಿಂದ ಇದೇ ರೀತಿ ಚಿನ್ನವನ್ನು ಅಪಹರಿಸಿದ್ದು, ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ತಾನೇ ಮಾಡಿರುವುದಾಗಿ ಆರೋಪಿ ಮಂಜುನಾಥ ಮಯ್ಯ ಒಪ್ಪಿಕೊಂಡಿದ್ದು, ಚಿನ್ನವನ್ನು ಸೊಸೈಟಿಯೊಂದರಲ್ಲಿ ಅಡವಿರಿಸಿದ್ದು, ಪೊಲೀಸರು ಚಿನ್ನವನ್ನು ಸ್ವಾಧೀನಪಡಿಸಿಕೊಂಡಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!