AccidentBlogCrime newsHealthHighlightsHuman storiesLifestyleLocal newsObituaryOthersTop StoriesTrending

ಬಳ್ಕೂರು: ಕಾರು ಸ್ಕೂಟರ್ ಡಿಕ್ಕಿ – ಸವಾರರಿಬ್ಬರು ಸಾವು

Aware others:

ಕುಂದಾಪುರ: ಕಾರು ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಸವಾರಿಬ್ಬರು ಸಾವನ್ನಪ್ಪಿದ ಘಟನೆ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರರನ್ನು ಬಸ್ರೂರು ಬಿ.ಎಚ್ ನಿವಾಸಿ ರಾಜೀವ ಶೆಟ್ಟಿ (64) ಹಳ್ನಾಡು ನಿವಾಸಿ ಸುದೀರ್ ದೇವಾಡಿಗ (35) ಎಂದು ಗುರುತಿಸಲಾಗಿದೆ.

ದ್ವಿಚಕ್ರ ಸವಾರರು ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದರು. ಅಭಿಷೇಕ್ ಎಂಬುವರು ಚಲಾಯಿಸುತ್ತಿದ್ದ ಕಾರು ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿತ್ತು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಹಾಗೂ ಬೈಕ್ ನಜ್ಜುಗುಜ್ಜಾಗಿದೆ.  ಸ್ಕೂಟಿಯಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ಹಾಗೂ ಸಹಸವಾರ ಇಬ್ಬರು ರಸ್ತೆಯ ಪಕ್ಕದ ಗದ್ದೆಗೆ ಬಿದ್ದಿದ್ದು ಸ್ಕೂಟರ್ ಸವಾರ ಸುಧೀರ ರವರ ತಲೆಗೆ ತೀವ್ರ ಸ್ವರೂಪದ ಗಾಯ ಹಾಗೂ ಸಹಸವಾರ ರಾಜೀವ ರವರ ಬಲಕಾಲಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ ವೈದ್ಯರು ಇಬ್ಬರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಕಂಡ್ಲೂರು ಪೊಲೀಸರು, ಹೈವೇ ಪಟ್ರೋಲ್ ಸ್ಥಳಕ್ಕಾಗಮಿಸಿ   ಸಂಚಾರ ಸುಗಮಗೊಳಿಸಿದರು.  ಕುಂದಾಪುರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!