BlogEducationFashionHighlightsHuman storiesLifestyleLocal newsOthersTop StoriesTrending

ಕುಂದಾಪುರ: ವಕೀಲರ ಸಂಘದ ಅಧ್ಯಕ್ಷರಾಗಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಅಧಿಕಾರ ಸ್ವೀಕಾರ

Aware others:

ಕುಂದಾಪುರ: ಪ್ರತಿಷ್ಠಿತ ಬಾರ್ ಅಸೋಸಿಯೇಷನ್ ಕುಂದಾಪುರ ರಿಜಿಸ್ಟರ್ಡ್ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಹಿರಿಯ ವಕೀಲರಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಆಚಾರ್ ಅವರನ್ನು ಬಾರ್ ಅಸೋಸಿಯೇಷನ್ ಕುಂದಾಪುರ ಅವಿರೋಧವಾಗಿ ಒಂದು ವರ್ಷದ ಅವಧಿಗೆ ಈ ಹಿಂದೆ ನಿಯೋಜಿಸಿದ್ದು, ಆ ಮೇರೆಗೆ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. 

ಇದುವರೆಗೆ ಹಂದಟ್ಟು ಪ್ರಮೋದ ಹಂದೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಸಂದೇಶ್ ಶೆಟ್ಟಿ ಜವಾಬ್ದಾರಿ ನಿರ್ವಹಿಸಿದ್ದು, ಉಳಿದ ಪದಾಧಿಕಾರಿಗಳು ಈ ಹಿಂದಿಂನಂತೆ ಮುಂದಿನ ಅವಧಿಗೆ ಮುಂದುವರಿಯಲಿದ್ದಾರೆ. ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬಾರ್ ಅಸೋಸಿಯೇಷನ್ ಎಲ್ಲಾ ಸದಸ್ಯರಿಗೂ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಕ್ರತಜ್ಞತೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!