BlogEconomyGovernmentHealthHighlightsHuman storiesLifestyleLocal newsOthersPoliticsTop StoriesTrending

ಉಡುಪಿ: ನೂತನ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಬಸವರಾಜ ಜಿ ಹುಬ್ಬಳ್ಳಿ ಅಧಿಕಾರ ಸ್ವೀಕಾರ

Aware others:

ಉಡುಪಿ: ಶಿವಮೊಗ್ಗ ಜಿಲ್ಲೆಯ, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಬಸವರಾಜ ಜಿ ಹುಬ್ಬಳ್ಳಿ ಇವರನ್ನು ರಾಜ್ಯ ಸರ್ಕಾರ ಸೊರಬದ ಇವರನ್ನು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ವರ್ಗಾವಣೆಗೊಳಿಸಿದ್ದು, ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಕೆಲವು ಸಮಯಗಳಿಂದ ಇದುವರೆಗೆ ಉಡುಪಿ ಜಿಲ್ಲೆಯ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಖಾಲಿಯಿತ್ತು. ಪ್ರಭಾರ ಅಧಿಕಾರಿಯಾಗಿ ಡಾ. ನಾಗಭೂಷಣ ಉಡುಪ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ರಾಜ್ಯಪಾಲರ ಆದೇಶದ ಮೇರೆಗೆ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಉಪ ಕಾರ್ಯದರ್ಶಿ ಅಕ್ಕಮಹಾದೇವಿ ಅವರು ವರ್ಗಾವಣೆ ಆದೇಶ ನೀಡಿದ್ದು, ಮುಂದಿನ ಆದೇಶದ ವರೆಗೆ ಕರ್ತವ್ಯದಲ್ಲಿ ಮುಂದುವರೆಯುವಂತೆ ಸೂಚಿಸಲಾಗಿದೆ.  


Aware others:

Leave a Reply

Your email address will not be published. Required fields are marked *

error: Content is protected !!