BlogCrime newsEntertainmentFashionHighlightsHuman storiesLifestyleLocal newsOthersTop StoriesTrending

ಮಣಿಪಾಲದಲ್ಲಿ ಹೊಡೆದಾಡಿದ ಬಸ್ ಚಾಲಕ, ಕಂಡಕ್ಟರ್ ಗಳು: ಇಬ್ಬರ ಮೇಲೆ ಎಫ್ಐಆರ್

Aware others:

ಉಡುಪಿ: ಟೈಮಿಂಗ್ ವಿಚಾರಕ್ಕೆ ಮಣಿಪಾಲ ಟೈಗರ್ ಸರ್ಕಲ್ ಖಾಸಗಿ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ನಡೆದ ಬಸ್ ಕಂಡಕ್ಟರ್ ಗಳಿಬ್ಬರ ನಡುವೆ ನಡೆದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್‌ ನ ಕಂಡಕ್ಟರ್‌ ವಿಜಯ ಕುಮಾರ್‌ ಹಾಗೂ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌ ನಡುವೆ ಗಲಾಟೆ ನಡೆದಿದ್ದು, ಇಬ್ಬರು ಆರೋಪಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಹೊಡೆದಾಡಿಕೊಂಡ ಆರೋಪಿಗಳಾದ ಉಚ್ಚಿಲ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌(25), ಹಾಗೂ ಆನಂದ ಬಸ್ಸಿನ ಕಂಡಕ್ಟರ್‌ ವಿಜಯಕುಮಾರ್‌(25) ಚಿತ್ರದುರ್ಗ, ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!