ಗಂಗೊಳ್ಳಿ: ಇಂದುಧರ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ
ಕುಂದಾಪುರ : ವಿಶ್ವನಾಥ ಯುವಕ ಮಂಡಲ ಗಂಗೊಳ್ಳಿ ಹಾಗೂ ಇಂದುಧರ ಯುವಕ ಮಂಡಲ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ “ಭೀಮ ವಂದನೆ” ಕಾರ್ಯಕ್ರಮ ಸೋಮವಾರ ನಡೆಯಿತು.

ದೇವಸ್ಥಾನದ ಅಧ್ಯಕ್ಷ ಗುರುರಾಜ್ ಗಂಗೊಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ಶ್ರೀಧರ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಜಿ.ಕೆ. ಗಂಗೊಳ್ಳಿ ಶುಭ ಹಾರೈಸಿದರು. ದೇವಸ್ಥಾನದ ಅರ್ಚಕ ಕೃಷ್ಣ ಜಿ.ಟಿ. ಹಾಗೂ ಸದಸ್ಯರು ಉಪಸ್ಥಿತರಿದ್ದರು. ದೇವಸ್ಥಾನದ ಕಾರ್ಯದರ್ಶಿ ವರದರಾಜ್ ಜಿ.ಟಿ. ಸ್ವಾಗತಿಸಿದರು. ಅಶೋಕ್ ಎನ್.ಡಿ. ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಸುದೀಪ್ ಜಿ.ಎನ್. ವಂದಿಸಿದರು.