BlogCulturalEconomyEducationEntertainmentFashionHighlightsHuman storiesLifestyleLocal newsOthersSuccess storiesTop StoriesTrendingWomen Care

ವಿದ್ಯಾರಣ್ಯ: ಮಂಥನ ಬೇಸಿಗೆ ಶಿಬಿರ 4ನೇ ದಿನದ ಕಾರ್ಯಕ್ರಮ ಉದ್ಘಾಟನೆ

Aware others:

ಕುಂದಾಪುರ: ನಮ್ಮ ಬದುಕಿಗೆ ಅಗತ್ಯವಾದ ಕಲೆಗಳನ್ನು, ತತ್ವಗಳನ್ನು, ಕೌಶಲಗಳನ್ನು, ಬೇಸಿಗೆ ಶಿಬಿರದಲ್ಲಿ ಕಲಿಸ ಕೊಡುತ್ತಾರೆ.ಅವುಗಳನ್ನು ಮಕ್ಕಳು ಜೀವನದುದ್ದಕ್ಕೂ ಅಳವಡಿಸಿಕೊಂಡು ಬದುಕನ್ನು ಇನ್ನಷ್ಟು ಸರಳವಾಗಿಸಿ ಉಲ್ಲಾಸಮಯವಾಗಿರಿಸಿಕೊಳ್ಳಬಹುದು. ಶಿಕ್ಷಣದಲ್ಲಿ ಪಾಠ ಅಧ್ಯಯನದ ಜೊತೆ ಬದುಕನ್ನು ಕಟ್ಟಿ ಕೊಡುವ ಪಠ್ಯೇತರ ಚಟುವಟಿಕೆಗಳ ಕಲಿಕೆ ಅತ್ಯಗತ್ಯ. ಮಕ್ಕಳ ಸರ್ವತೋಮುಖ ಪ್ರಗತಿಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ ಎಂದು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇದರ ಪ್ರಾಂಶುಪಾಲರಾದ ಪ್ರೊ.ಭಾಸ್ಕರ ಶೆಟ್ಟಿ ಹೇಳಿದರು.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ  ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ನಾಲ್ಕನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಿದ್ಕಲ್ ಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಘವೇಂದ್ರ ಹೆಬ್ಬಾರ್ ಮಾತನಾಡಿ, “ಬದುಕಿನಲ್ಲಿ ಕನಸು ಕಾಣಬೇಕು ಮತ್ತು ಕಂಡ ಕನಸುಗಳನ್ನು ನನಸಾಗಿಸುವತ್ತ ಪ್ರಯತ್ನಿಸಬೇಕು. ಸಾಧನೆಯ ಹಾದಿಯಲ್ಲಿ ಸವಾಲುಗಳು, ಸಮಸ್ಯೆಗಳು ಎದುರಾದರೂ ಅವುಗಳನ್ನು ಧೈರ್ಯದಿಂದ ಎದುರಿಸಿ ಯಶಸ್ಸು ಕಾಣಬೇಕು. ಸಿಕ್ಕಿದ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು”ಎಂದರು.

 

ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷರಾದ ಕಿಶೋರ್ ಶೆಟ್ಟಿ, ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯೋಪಾಧ್ಯಾಯ ಪ್ರದೀಪ್ ಕೆ.ಉಪಸ್ಥಿತರಿದ್ದರು.

ಪ್ರತಿಭಾನ್ವಿತ ಯಕ್ಷಗಾನ ಕಲಾವಿದೆ, ಸಂಪನ್ಮೂಲ ವ್ಯಕ್ತಿ  ಅಶ್ವಿನಿ ಕೊಂಡದಕುಳಿ ಅವರಿಂದ ಯಕ್ಷಗಾನ ತರಬೇತಿ, ಪ್ರಶಸ್ತಿ ಪುರಸ್ಕೃತ ಕಲಾವಿದ ಎಸ್.ಎಫ್.ಹುಸೇನಿ ಮೈಸೂರು ಅವರಿಂದ ಪೇಪರ್ ಕ್ರಾಪ್ಟ್ ತಯಾರಿಕೆ, ಶಿಕ್ಷಕ ಗಿರೀಶ್ ಅವರಿಂದ ಚಿತ್ರಕಲೆ ತರಬೇತಿ  ನಡೆಯಿತು.


Aware others:

Leave a Reply

Your email address will not be published. Required fields are marked *

error: Content is protected !!