BlogCulturalEducationEntertainmentFashionHighlightsLifestyleLocal newsOthersSuccess storiesTop StoriesTrending

ವಿದ್ಯಾರಣ್ಯ: ಮಂಥನ ಶಿಬಿರದಲ್ಲಿ ಹಾಡಿ ಕುಣಿದಾಡಿದ ಪುಟಾಣಿಗಳು – ಬಿ. ಜಯಕರ ಶೆಟ್ಟಿಯವರಿಂದ ಉದ್ಘಾಟನೆ

Aware others:

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಡೆಸುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನ ಬೂಟ್ ಕ್ಯಾಂಪ್ ಮೂಲಕ ಸಾಹಸ ಆಟಗಳನ್ನಾಡಿ ಸಂತಸಪಟ್ಟರು. ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಬಿ.ಜಯಕರ ಶೆಟ್ಟಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಕ್ಕಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಂಡರೆ ಬದುಕಿನಲ್ಲಿ ಪ್ರಗತಿ ಸಾಧ್ಯ.  ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಸಹಕಾರಿಯಾಗುತ್ತದೆ ಎಂದರು. ರಘುಸನ್ ಟೈಲ್ಸ್ ಕುಂದಾಪುರ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕ ಮಹೇಂದ್ರ ಶೆಟ್ಟಿ ಮಾತನಾಡಿ, “ಬೇಸಿಗೆ ಶಿಬಿರಗಳು ಸುಲಭ ಕೌಶಲಗಳ ಮೂಲಕ ಸಮಾಜದಲ್ಲಿ ನಾವು ಹೇಗೆ ವ್ಯವಹರಿಸಬೇಕು ಎನ್ನುವುದನ್ನು ಕಲಿಸುತ್ತವೆ ಎಂದರು.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯೋಪಾಧ್ಯಾಯ ಪ್ರದೀಪ್ ಕೆ.ಉಪಸ್ಥಿತರಿದ್ದರು. ರಂಗ ನಿರ್ದೇಶಕರಾದ ಸತ್ಯನಾ ಕೊಡೇರಿ ಮತ್ತು ಗಣಪತಿ ಹೋಬಳಿದಾರ್ ರಂಗ-ನಾಟಕ ತರಬೇತಿ, ಕ್ರಾಫ್ಟ್ ತಯಾರಿ ತರಬೇತಿ ನಡೆಯಿತು.


Aware others:

Leave a Reply

Your email address will not be published. Required fields are marked *

error: Content is protected !!