ಬೈಂದೂರು: ನೆಲ್ಯಾಡಿಬೈಲಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಕಲ ಸಿದ್ಧತೆ, ಚಪ್ಪರ ಮುಹೂರ್ತ ಸಂಪನ್ನ
ಬೈಂದೂರು: ಮೇ 10ರಂದು ಬೈಂದೂರು ತಾಲೂಕಿನ ನೆಲ್ಯಾಡಿಬೈಲಿನಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇಂದು (ಏಪ್ರಿಲ್ 30) ಬುಧವಾರ ಬೆಳಿಗ್ಗೆ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪೂರಕವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬೈಂದೂರಿನ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಒಟ್ಟು ಸೇರಿ ನಡೆಸುವ ಈ ಕಾರ್ಯಕ್ರಮದಲ್ಲಿ ಬೈಂದೂರಿನ ಎಲ್ಲ ಭಕ್ತಾದಿಗಳು ಸಂಪೂರ್ಣ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ಹೇಳಿದರು
ಶ್ರೀನಿವಾಸ ಕಲ್ಯಾಣೋತ್ಸವದ ನೇತೃತ್ವವಹಿಸಿರುವ ಸಿದ್ಧ ಸಮಾಧಿ ಯೋಗ ಸಂಸ್ಥೆಯ ಮುಖ್ಯಸ್ಥ, ಆಚಾರ್ಯ ಕೇಶವಜೀ ಬೆಲ್ನಿ ಅವರು ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಭಿನ್ನವಿಸಿದರು. ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ಶೆಟ್ಟಿ ನೆಲ್ಯಾಡಿ ಅವರು ಸರ್ವರ ಸಹಕಾರ ಬಯಸಿದರು.
ಹಲವಾರು ಗಣ್ಯರು ಧಾರ್ಮಿಕ ಮುಖಂಡರು ಸಾಮಾಜಿಕ ಚಿಂತಕರು ಚಪ್ಪರಮಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.