ಕುಂದಾಪುರ: ಮುಂಗೋಪಿ ಯುವಕನ ದೇಹ ವಾರಾಹಿ ಹೊಳೆಯಲ್ಲಿ ಪತ್ತೆ

ಕುಂದಾಪುರ: ಮಾತು ಮಾತಿಗೆ ಸಿಟ್ಟು ಮಾಡಿಕೊಳ್ಳುತ್ತಿದ್ದ ಯುವಕನೊಬ್ಬನಿಗೆ ಆತನ ಅಜ್ಜಿ ತಾಯಿಗೆ ಬೊಂಡ ಕೊಟ್ಟು ಬಾ ಎಂದು ಹೇಳಿದ್ದಕ್ಕೆ ಮನೆಯಿಂದ ಹೊರ ಹೋದ ಬಳಿಕ ನಾಪತ್ತೆಯಾಗಿದ್ದು, ವಾರಾಹಿ ಹೊಳೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ನಿವಾಸಿ ಗಣಪತಿ ಎಂಬುವರ ಮೊಮ್ಮಗ ಸ್ವಸ್ತಿಕ್ (21) ಎಂಬಾತ 10 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಮನೆಯಲ್ಲಿಯೇ ಇದ್ದು ಸಣ್ಣ ಪುಟ್ಟ ವಿಚಾರಕ್ಕೆ ಕೋಪ ಮಾಡಿಕೊಳ್ಳುವ ಸ್ವಭಾವ ಹೊಂದಿದ್ದ. ಮಾನಸಿಕ ಖಿನ್ನತೆಯೂ ಇತ್ತು ಎನ್ನಲಾಗಿದೆ. ಬುಧವಾರ ಮಧ್ಯಾಹ್ನ ಸ್ವಸ್ತಿಕ್ ನಲ್ಲಿ ಆತನ ಅಜ್ಜಿ ತಾಯಿಗೆ ಬೊಂಡ ಕೊಟ್ಟು ಬರುವಂತೆ ಹೇಳಿದ್ದಕ್ಕೆ ಕೋಪಗೊಂಡು ಸೈಕಲ್ ತೆಗೆದುಕೊಂಡು ಹೋಗಿದ್ದು ವಾಪಾಸ್ಸು ಮನೆಗೆ ಬಂದಿಲ್ಲ. ಗುರುವಾರ ಮಧ್ಯಾಹ್ನ ಸ್ವಸ್ತಿಕ್ ನ ಮೃತದೇಹ ಬಳ್ಕೂರು ಕಳುವಿನಬಾಗಿಲು ವಾರಾಹಿ ಹೊಳೆಯಲ್ಲಿ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.