ಯುವ ಕಾಂಗ್ರೆಸ್ ಬಲವರ್ಧನೆಗೆ ಸಂಕಲ್ಪ – ಚಿಕ್ಕಮಗಳೂರು ಉಸ್ತುವಾರಿಯಾಗಿ ಅಜಿತ್ ಶೆಟ್ಟಿ ವಡ್ಡರ್ಸೆ
ಕುಂದಾಪುರ: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಪಕ್ಷದ ಬಲವರ್ಧನೆಗೆ ಭರ್ಜರಿ ಆರಂಭಿಸಿದೆ. ಇದರ ಮೊದಲ ಹಂತವಾಗಿ ಯುವ ಕಾಂಗ್ರೆಸ್ ಬಲಿಷ್ಠ ಗೊಳಿಸಲು ಆನ್ಲೈನ್ ಸದಸ್ಯತ್ವ ಆರಂಭಿಸಿತ್ತು.

ಇದೀಗ ಎರಡನೇ ಹಂತದ ಪಕ್ಷ ಸಂಘಟನೆಗೆ ಮುಂದಾಗಿದ್ದು ರಾಜ್ಯದ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ವಿವಿಧ ಜಿಲ್ಲೆಗಳ ಪಕ್ಷದ ಬಲವರ್ಧನೆಗೆ ಉಸ್ತುವಾರಿಗಳನ್ನಾಗಿ ನೇಮಿಸಿದೆ.

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಅವರನ್ನು ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ನೇಮಕಗೊಳಿಸಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಆದೇಶ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಕುಮಾರ್ ಶೆಟ್ಟಿ ವಡ್ದರ್ಸೆ ಅವರು, ಚಿಕ್ಕಮಗಳೂರು ಜಿಲ್ಲೆಯ ಯುವಕರ ಭವಿಷ್ಯದ ಸಂಕಲ್ಪದೊಂದಿಗೆ, ಕಾಂಗ್ರೆಸ್ ಪಕ್ಷದ ನಿಷ್ಠೆ, ತತ್ವ ಮತ್ತು ಶ್ರದ್ಧೆಯನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ನಾನು ನನ್ನ ಶಕ್ತಿಮೀರಿ ದುಡಿಯುತ್ತೇನೆ ಎಂದು ತಿಳಿಸಿದ್ದಾರೆ.