Auto worldBlogCrime newsCulturalEconomyHealthHighlightsHuman storiesLifestyleLocal newsObituaryOthersPoliticsReligionState newsTop StoriesTrendingWomen Care

ಚಲಿಸುತ್ತಿದ್ದ ಬೈಕಿನ ಮೇಲೆ ವಿದ್ಯುತ್‌ ತಂತಿ ಬಿದ್ದು ಯುವ ಯಕ್ಷಕಲಾವಿದ ರಂಜಿತ್ ಬನ್ನಾಡಿ ಸಾವು

Aware others:

ಕುಂದಾಪುರ: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತಪಟ್ಟ ಘಟನೆ ಆಗುಂಬೆ ಸಮೀಪದ ಕೊಪ್ಪ ಬಳಿ ಸಂಭವಿಸಿದ್ದು, ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರನ್ನು ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಎಂದು ಗುರುತಿಸಲಾಗಿದೆ.

ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಯಕ್ಷಗಾನ ಪ್ರದರ್ಶನ ಮಳೆಯಿಂದ ರದ್ದಾಗಿದ್ದು, ಸ್ಕೂಟರ್ ನಲ್ಲಿ ವಾಪಾಸಾಗುತ್ತಿದ್ದ ವೇಳೆ ಆಗುಂಬೆ ಕೊಪ್ಪ ಸಮೀಪ ವಿದ್ಯುತ್ ತಂತಿ ಬೈಕಿನ ಮೇಲೆ ಬಿದ್ದಿದೆ. ಘಟನೆಯಿಂದ ಸ್ಕೂಟರ್ ಸವಾರ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರ ಸಹಕಾರದಿಂದ ಮಣಿಪಾಲ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಹ ಸವಾರ ವಿನೋದ್ ರಾಜ್ ಸಣ್ಣ ಪುಟ್ಟ ಗಾಯಗಳೊಂದಿಗೆ  ಪಾರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!