ವಿದ್ಯಾರಣ್ಯ: ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ (ರಿ.) ವತಿಯಿಂದ ಶಿಕ್ಷಕರ ಓರಿಯಂಟೇಶನ್ ಕಾರ್ಯಕ್ರಮ 2025


ಕುಂದಾಪುರ: ಮಕ್ಕಳನ್ನು ಪಠ್ಯ ಪುಸ್ತಕಗಳಿಂದಾಚೆಗೆ ಕೊಂಡೊಯ್ದು ಸುಜ್ಞಾನದ ದೀವೆಗೆಯಾಗುವವನು ಶ್ರೇಷ್ಟ ಶಿಕ್ಷಕ ಎನಿಸಿಕೊಳ್ಳುತ್ತಾನೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರ ಜಗತ್ತಿಗೆ ಪರಿಚಯಿಸುವುದೇ ನೈಜ ಶಿಕ್ಷಣದ ಪರಿಕಲ್ಪನೆ. ಪ್ರಾಯೋಗಿಕ ಕಲಿಕೆ ಮಕ್ಕಳಿಗೆ ಆಸಕ್ತಿ ಮೂಡಿಸುತ್ತದೆ. ಅದಕ್ಕೆ ಶಿಕ್ಷಕರಿಗೆ ತರಬೇತಿಗಳು ಅಗತ್ಯ. ಪೂರಕ ತರಬೇತಿಗಳಲ್ಲಿ ಶ್ರದ್ಧಾಪೂರ್ವಕ ಭಾಗವಹಿಸಿದಾಗ ಶಿಕ್ಷಣ ಗುಣಮಟ್ಟ ಹೆಚ್ಚಲು ಸಾಧ್ಯ ಎಂದು ಹೆಸ್ಕುತೂರು ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಹೇಳಿದರು. ಇವರು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೇ 26 ರಿಂದ 28 ರ ವರೆಗೆ ನಡೆದ ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಗಾರ ಒರಿಯೆಂಟೇಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಶಿಕ್ಷಕರಿಗೆ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಿಕ್ಷಕರನ್ನು ಇನ್ನಷ್ಟು ಕ್ರಿಯಾಶೀಲರಿನ್ನಾಗಿಸುತ್ತಿದ್ದೇವೆ. ನಿರಂತರ ಅನ್ವೇಷಣೆಗಳ ಮೂಲಕ ಹೊಸ ಚಿಂತನೆಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಈಗಿನ ಮೊಬೈಲ್ ಯುಗದಲ್ಲಿ ಮಕ್ಕಳನ್ನು ಕಲಿಕಾ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ಮಾಡಲು ಶಿಕ್ಷಕರ ತರಬೇತಿ ಕಾರ್ಯಾಗಾರಗಳು ತುಂಬಾ ಸಹಕಾರಿಯಾಗುತ್ತಿದೆ ಎಂದರು.



ಮೊದಲ ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಫ್ರೀಲ್ಯಾನ್ಸ್ ಅಕಾಡೆಮಿಕ್ ಕೌನ್ಸಿಲ್ ಕನ್ಸಲ್ಟೆಂಟ್ ಆಂಡ್ ಸಾಫ್ಟ್ ಸ್ಕಿಲ್ಸ್ ತರಬೇತುದಾರೆ ಅರುಣ. ಎಸ್ ಭಾಗವಹಿಸಿದರು. ಸಂಸ್ಥೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ ಹಾಗೂ ಓರಿಯಂಟಲ್ ಬ್ಲಾಕ್ ಸ್ವಾನ್ ಪ್ರಕಾಶನದ ಚೇತನ್ ಉಪಸ್ಥಿತರಿದ್ದರು. ಶಿಕ್ಷಕಿ ಸುಧಾ ಕಾರ್ಯಕ್ರಮ ನಿರೂಪಿಸಿದರು.