BlogCrime newsHealthHighlightsHuman storiesLifestyleLocal newsObituaryOthersTop StoriesTrending

ಕೋಟಿಲಿಂಗೇಶ್ವರ ದೇವಸ್ಥಾನದ ಮಾಜಿ ಅಧ್ಯಕ್ಷ ಎಮ್.ಪ್ರಭಾಕರ್ ಶೆಟ್ಟಿ ನಿಧನ

Aware others:

ಕುಂದಾಪುರ:  ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಮ್.ಪ್ರಭಾಕರ್ ಶೆಟ್ಟಿ(65) ಮೂಡುಗೋಪಾಡಿ ಅವರು ಬುಧವಾರ ಸಂಜೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಇತಿಹಾಸ ಪ್ರಸಿದ್ಧ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸತತ 2 ಅವಧಿಯ ಅಧ್ಯಕ್ಷರಾಗಿ ಎಲ್ಲಾ ಸದಸ್ಯರುಗಳೊಂದಿಗೆ ಸಹಮತಿಯಿಂದ ಕೈಜೋಡಿಸಿಕೊಂಡು ದೇಗುಲದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡಿಕೊಂಡು ಮಾದರಿಯಾದವರು.

ಧ್ವಜಮರ ಪ್ರತಿಷ್ಠೆ ಹಾಗೂ ಜೀಣೋದ್ಧಾರ ಕಾರ್ಯ ಸೇರಿದಂತೆ ಬಹುತೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದರು. ಕೋಟೇಶ್ವರದ ಪ್ರತಿಷ್ಟಿತ ರೋಟರಿ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ ರೋಟರಿ ಅಸಿಸ್ಟೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿ ತಮ್ಮದೇ ಆದ ಸಾಮಾಜಿಕ ಸೇವೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಸ್ಥಳೀಯ ಹಲವು ಸಂಘ ಸಂಸ್ಥೆಗಳಲ್ಲಿ ಗೌರವಾಧ್ಯಕ್ಷರಾಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿದ ಇವರು ಬೀಜಾಡಿ ಗೋಪಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು.

ಇವರು ತಾಯಿ, ಪತ್ನಿ, ಪುತ್ರ, ಪುತ್ರಿಯರನ್ನು ಸೇರಿದಂತೆ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!