ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರ
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ದೇವ ಎಜುಕೇಶನ್ ಆಂಡ್ಯ್ ಕಲ್ಚರಲ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಪುನಶ್ಚೇತನ ತರಬೇತಿ ಕಾರ್ಯಾಗಾರ ನಡೆಯಿತು.

ಎರಡನೇ ದಿನದ ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸ್ಮಿತಾ ಮತಾಯ ಅವರು ಮಾತನಾಡಿ, ಇಂದಿನ ಶೈಕ್ಷಣಿಕ ಕಾಲಘಟ್ಟದಲ್ಲಿ ಚಟುವಟಿಕೆ ಆಧಾರಿತ ಕಲಿಕೆ ಮತ್ತು ಸಂವಹನ ಕೌಶಲ್ಯಗಳು ಬಹುಮುಖ್ಯ. ವಿದ್ಯಾರ್ಥಿಗಳು ಬುದ್ಧಿವಂತರಾಗಿದ್ದು, ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರು ಹೆಚ್ಚು ಸಾಮರ್ಥ್ಯ ಮತ್ತು ಚಟುವಟಿಕೆಗಳ ಕೌಶಲ್ಯ ಹೊಂದಿರಬೇಕು. ಅದಕ್ಕಾಗಿ ಪುನಶ್ಚೇತನ ಕಾರ್ಯಾಗಾರಗಳು ಹೆಚ್ಚು ಪರಿಣಾಮಕಾರಿ ಎಂದರು.
ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಶ್ರೀ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖೋಪಾಧ್ಯಾಯಿನಿ ಪ್ರಮೀಳ ಡಿಸೋಜ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಪದ್ಮಾ ಸ್ವಾಗತಿಸಿ, ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.