ಬೈಂದೂರು: ಕೊರಗ ಸಮುದಾಯ ಪ್ರದೇಶಗಳ ಅಭಿವೃದ್ಧಿಗೆ 4.39 ಕೋಟಿ ಅನುದಾನ ಮಂಜೂರು : ಶಾಸಕ ಗಂಟಿಹೊಳೆ ಹರ್ಷ
ಕುಂದಾಪುರ: ಕೇಂದ್ರ ಸರಕಾರದ ಪಿ.ಎಂ ಜನ್ ಮನ್ ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯ ವಾಸವಾಗಿರುವ ಪ್ರದೇಶಗಳ ಅಭಿವೃದ್ಧಿಗೆ ರೂ. 4.39 ಕೋಟಿ ಅನುದಾನ ಮಂಜೂರಾಗಿದೆ ಎಂದು ಗುರುರಾಜ್ ಗಂಟಿಹೊಳೆ ಹೇಳಿದ್ದಾರೆ.

ಪಿಎಂ ಜನ್ ಮನ್ (ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ) ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ನಿಟ್ಟಿನಲ್ಲಿ ಈಗಾಗಲೇ ಹೊಸ ಅಭಿಯಾನವನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಕೊರಗ ಮತ್ತು ಜೇನು ಕುರುಬ ಸಮುದಾಯಗಳಿವೆ. ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 ರಲ್ಲಿ ನಡೆಸಿದ ಸಮೀಕ್ಷೆಯ ಅನುಸಾರ ವಂಡ್ಸೆ, ಹರ್ಕೂರು, ಇಡೂರು ಭಾಗದ ಕೊರಗ ಸಮುದಾಯದ ಮನೆಗಳು ಇರುವ ಪ್ರದೇಶಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿ ರೂ. 4.39 ಕೋಟಿ ಅನುದಾನ ಕೇಂದ್ರ ಸರಕಾರದಿಂದ ಮಂಜೂರುಗೊಂಡಿದೆ. ಇದಕ್ಕಾಗಿ ಕೇಂದ್ರ ಸರಕಾರ ಹಾಗೂ ಮಾನ್ಯ ಪ್ರಧಾನ ಮಂತ್ರಿಗಳು ಮತ್ತು ಸಂಸದ ಬಿ. ವೈ ರಾಘವೇಂದ್ರ ರವರಿಗೆ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಧನ್ಯವಾದ ಹೇಳಿದ್ದಾರೆ.