BlogEducationFashionHighlightsHuman storiesLifestyleLocal newsOthersState newsTop StoriesTrending

ಆರ್ಥಿಕ ಸದೃಢತೆಯಿಂದ ಬಿಲ್ಲವ ಸಮಾಜದ ಏಳಿಗೆ ಸಾಧ್ಯ ಅಶೋಕ್ ಪೂಜಾರಿ ಬೀಜಾಡಿ

Aware others:

ಕುಂದಾಪುರ: ಅತ್ಯಂತ ಕೆಟ್ಟ ಕಡೆಯ ಕುಟುಂಬಗಳು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸದೃಢತೆ ಹೊಂದಿದಾಗ ಬಿಲ್ಲವ ಸಮಾಜದ ಏಳಿಗೆ ಸಾಧ್ಯ ಎಂದು ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.

ಅವರು ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬೈಂದೂರು ತಾಲೂಕು ಇದರ ವತಿಯಿಂದ ಮರವಂತೆಯ ಸಾಧನ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು

ಬಿಲ್ಲವ ಸಮಾಜವು ಉದ್ಯಮ ಕ್ಷೇತ್ರದಲ್ಲಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆ ನೀಡಿದೆ ಆದರೂ ಸಮಾಜದ ಅತ್ಯಂತ ಕಟ್ಟ ಕಡೆಯ ಕುಟುಂಬಗಳಿಗೆ ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣದ ಅಗತ್ಯವಿದ್ದು ಆ ನಿಟ್ಟಿನಲ್ಲಿ ಸಮಾಜ ಹಾಗೂ ಸಂಘಟನೆಗಳು ಕೆಲಸ ಮಾಡಬೇಕಿದೆ ಎಂದರು. ಇದೇ ಸಂದರ್ಭ ಪ್ರತಿಭಾ ಪುರಸ್ಕಾರ ಹಾಗೂ ಒಂದರಿಂದ ಏಳನೇ ತರಗತಿವರೆಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಮಂಜುನಾಥ ಪೂಜಾರಿ ಸೇನಾಪುರ ವಹಿಸಿದ್ದರು. ಬೈಂದೂರು ತಾಲೂಕು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಇದರ ಅಧ್ಯಕ್ಷ ಗಣೇಶ ಕೆ. ಪೂಜಾರಿ ಅಪೂರ್ವ ಮರವಂತೆ, ಗೌರವಾಧ್ಯಕ್ಷ ಅಣ್ಣಪ್ಪ ಬಿಲ್ಲವ ಮರವಂತೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉದ್ಯಮಿ, ದಾನಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಅಧ್ಯಕ್ಷ ಗೋವಿಂದಬಾಬು ಪೂಜಾರಿ, ಉದ್ಯಮಿಗಳು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ನಾವುಂದ ಅಧ್ಯಕ್ಷ ಜಗದೀಶ ಪೂಜಾರಿ ಹಕ್ಲಾಡಿ, ಬೈಂದೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನ ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ, ಸತೀಶ ಪೂಜಾರಿ ಉದ್ಯಮಿಗಳು, SRP ಗೋವಾ, ಉಪಾಧ್ಯಕ್ಷ ಚಂದ್ರ ಪೂಜಾರಿ, ಕಾರ್ಯದರ್ಶಿ ಶ್ಯಾಮಲಾ, ಕೋಶಾಧಿಕಾರಿ ಸೋಮಯ್ಯ ಬಿಲ್ಲವ ಹಾಗೂ ಸದಸ್ಯರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!