AccidentBlogCrime newsHealthHighlightsHuman storiesLifestyleLocal newsObituaryOthersTop StoriesTrending

ಬ್ರಹ್ಮಾವರ: ಹಿಟ್ ಎಂಡ್ ರನ್ – ಪಾದಾಚಾರಿ ಗುರುತು ಸಿಗದಂತೆ ಛಿದ್ರ!

Aware others:

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬನಿಗೆ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದು ಅಪಘಾತ ನಡೆಸಿ ಪರಾರಿಯಾದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ಥಾನದ ಸಮೀಪ ಐರೋಡಿ ಎಂಬಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

ಅಪಘಾತದಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿ ಮುಖದ ಗುರುತು ಸಿಗದಂತೆ ಛಿದ್ರವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸುಮಾರು 35 ವರ್ಷ ಪ್ರಾಯದ ಯುವಕ ಇರಬಹುದೆಂದು ಅಂದಾಜಿಸಲಾಗಿದ್ದು, ವಾಕಿಂಗ್ ಹೋಗುತ್ತಿದ್ದಿರಬಹುದು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಮೈಮೇಲಿದ್ದ ಬಟ್ಟೆ ಕಿತ್ತು ಹರಿದು ಬೆತ್ತಲೆ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!