ನಾಳೆ ಶ್ರೀ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಚ್ಚಳ್ಳಿ ಇದರ ವಾರ್ಷಿಕೋತ್ಸವ, ಗೌರವ ಸನ್ಮಾನ

ಸಿದ್ಧಾಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಚ್ಚಳ್ಳಿ ಇದರ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮವು ಸಿದ್ದಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ನಾಳೆ ಬೆಳಿಗ್ಗೆ 9ಗಂಟೆಗೆ ನಡೆಯಲಿದೆ.
ಮಾಜೀ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಚ್ಚಳ್ಳಿ ಇದರ ಗೌರವಾಧ್ಯಕ್ಷ ಭೋಜು ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷ ಸೀತಾರಾಮ ಗಾಣಿಗ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಉಡುಪಿ ಜಿಲ್ಲಾ ಗ್ರಾಮ ವಿಕಾಸ ಸಹ ಸಂಯೋಜಕ ಸುಧಾಕರ ಆಜ್ರಿ, ವಂಡ್ಸೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪರಶುರಾಮ ಎಂ. ಮುತ್ತಪ್ಪಗೋಳ, ಹೊಸಂಗಡಿ ಗ್ರಾಮ ಪಂಚಾಯತ್ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಜೇಂದ್ರ ಎಂ,
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಮುಸ್ತಾಕ್ ಹೆನ್ನಾಬೈಲ್ ಮೊದಲಾದವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭ ವೀರ ಯೋಧ ದಿ ಅನೂಪ್ ಪೂಜಾರಿ ಬೀಜಾಡಿ ಕುಟುಂಬಕ್ಕೆ ಗೌರವ ಸಮರ್ಪಣೆ, 2024-2025ನೇ ಸಾಲಿನಲ್ಲಿ ಶೇ. 100 ಫಲಿತಾಂಶ ಪಡೆದ ಆಯ್ದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗೌರವ, ಅದೇ ಸಾಲಿನ S.S.L.C. ಹಾಗೂ P.U.C ಹಾಗೂ ಪದವಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ, ಸಿದ್ದಾಪುರ ವಲಯದ ಅಂಗನವಾಡಿ ಮೇಲ್ವಿಚಾರಹಿ ಸೇರಿದಂತೆ 27 ಅಂಗನವಾಡಿ ಶಿಕ್ಷಕಿಯರಿಗೆ ಗೌರವ, ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶಾಲೆಗಳಿಗೆ ಗೌರವ, ಮತ್ತು ಅನಾರೋಗ್ಯ ಪೀಡಿತ ಮಗುವಿಗೆ ಸಹಾಯಧನ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ರಾಜೇಂದ್ರ ಬೆಚ್ಚಲ್ಲಿ ತಿಳಿಸಿದ್ದಾರೆ.