AccidentAuto worldBlogCrime newsHighlightsHuman storiesLifestyleLocal newsObituaryOthersTop StoriesTrending

ಕುಂದಾಪುರ: ಬಸ್-ಬೈಕ್ ಢಿಕ್ಕಿ: ಸವಾರ ಸಾವು

Aware others:

ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್ ಸುಟ್ಟು ಹೋದ ಘಟನೆ ಹೆಮ್ಮಾಡಿ – ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಸಿಗಂಧೂರು ನಿವಾಸಿ ಶರತ್ (25) ಎಂದು ಗುರುತಿಸಲಾಗಿದೆ.

ಶರತ್ ಡ್ಯೂಕ್ ಬೈಕಿನಲ್ಲಿ ಅತೀ ವೇಗವಾಗಿ ಕೊಲ್ಲೂರಿನಿಂದ ಕುಂದಾಪುರದತ್ತ ಪ್ರಯಾಣಿಸುತ್ತಿದ್ದ. ಖಾಸಗೀ ಬಸ್ ಹೆಮ್ಮಾಡಿಯಿಂದ ಕೊಲ್ಲೂರಿನತ್ತ  ತೆರಳುತ್ತಿತ್ತು. ಅಪಘಾತದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು, ಶರತ್ ಗಂಭೀರ ಗಾಯಗಳೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

ಇದೇ ಸಂದರ್ಭ ಡ್ಯೂಕ್ ಬೈಕ್‌ನ ರೇಡಿಯೇಟರ್ ಮೇಲೆ ಪೆಟ್ರೋಲ್ ಬಿದ್ದ ಕಾರಣ ಬೈಕ್ ಗೆ ಬೆಂಕಿ ತಗುಲಿ ಭಾಗಶಃ ಸುಟ್ಟು ಕರಕಲಾಗಿದೆ. ಶಂಕರನಾರಾಯಣ ಠಾಣೆಯ ವೃತ್ತನಿರೀಕ್ಷಕ ಜಯರಾಮ್ ಡಿ ಗೌಡ, ಕುಂದಾಪುರ ಸಂಚಾರಿ ಠಾಣೆಯ ಪಿಎಸೈ ಪ್ರಸಾದ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!