BlogCulturalEconomyEducationEntertainmentFashionHealthHelpHighlightsHuman storiesLifestyleLocal newsOthersState newsSuccess storiesTop StoriesTrendingWomen Care

ನಿಸ್ವಾರ್ಥ ಸಮಾಜ ಸೇವೆಗೆ ರಾಜೇಂದ್ರ ಬೆಚ್ಚಳ್ಳಿ ಮಾದರಿ :ಅಶೋಕ್ ಪೂಜಾರಿ ಬೀಜಾಡಿ – ಶ್ರೀ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಚ್ಚಳ್ಳಿ ವಾರ್ಷಿಕೋತ್ಸವ

Aware others:

ಸಿದ್ಧಾಪುರ: ಉದ್ಯೋಗ ಬಿಟ್ಟು ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜ ಸೇವೆ ಮಾಡುತ್ತಿರುವ ರಾಜೇಂದ್ರ ಬೆಚ್ಚಳ್ಳಿ ನಿಸ್ವಾರ್ಥ ಸಮಾಜ ಸೇವೆಗೆ ಮಾದರಿ. ಅವರ ಆದರ್ಶ ಸೇವೆಗೆ ನಾವೆಲ್ಲರೂ ಜೊತೆಯಾಗಬೇಕು ಎಂದು ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.

ಸಿದ್ದಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ಭಾನುವಾರ ನಡೆದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಶ್ರೀ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಚ್ಚಳ್ಳಿ ಇದರ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜೇಂದ್ರ ಬೆಚ್ಚಳ್ಳಿ ಅವರು, ಶ್ರೀ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ ಬೆಳೆದು ಬಂದ ದಾರಿಯನ್ನು ವಿವರಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷ ಸೀತಾರಾಮ ಗಾಣಿಗ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಇದೇ ಸಂದರ್ಭ ಹುತಾತ್ಮ ವೀರ ಯೋಧ ದಿ ಅನೂಪ್ ಪೂಜಾರಿ ಬೀಜಾಡಿ ಕುಟುಂಬವನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಬಳಿಕ ಹಾಲಾಡಿ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯಲ್ಲಿ 625ಕ್ಕೆ 625 ಅಂಕ ಪಡೆದ ಶ್ರೀರಾಮ್ ಶೆಟ್ಟಿ ಹಾಗೂ ಮುಖ್ಯ ಶಿಕ್ಷಕಿಯನ್ನು ಗೌರವಿಸಿ ಸನ್ಮಾನಿಸಲಾಯಿತು. 2024-2025ನೇ ಸಾಲಿನಲ್ಲಿ ಶೇ. 100 ಫಲಿತಾಂಶ ಪಡೆದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗೌರವ, ಅದೇ ಸಾಲಿನ ಎಸ್ ಎಸ್ ಎಲ್ ಸಿ., ಪಿಯುಸಿ ಹಾಗೂ ಪದವಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಸಿದ್ದಾಪುರ ವಲಯದ ಅಂಗನವಾಡಿ ಮೇಲ್ವಿಚಾರಹಿ ಸೇರಿದಂತೆ 27 ಅಂಗನವಾಡಿ ಶಿಕ್ಷಕಿಯರಿಗೆ ಗೌರವ, ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶಾಲೆಗಳಿಗೆ ಗೌರವ, ಮತ್ತು ಅನಾರೋಗ್ಯ ಪೀಡಿತ ಮಗುವಿಗೆ ಸಹಾಯಧನ ಹಸ್ತಾಂತರ ಕಾರ್ಯಕ್ರಮಗಳು ನಡೆದವು.

ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಚ್ಚಳ್ಳಿ ಇದರ ಗೌರವಾಧ್ಯಕ್ಷ ಭೋಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಉಡುಪಿ ಜಿಲ್ಲಾ ಗ್ರಾಮ ವಿಕಾಸ ಸಹ ಸಂಯೋಜಕ ಸುಧಾಕರ ಆಜ್ರಿ, ವಂಡ್ಸೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪರಶುರಾಮ ಎಂ. ಮುತ್ತಪ್ಪಗೋಳ, ಹೊಸಂಗಡಿ ಗ್ರಾಮ ಪಂಚಾಯತ್ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಜೇಂದ್ರ ಎಂ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಮುಸ್ತಾಕ್ ಹೆನ್ನಾಬೈಲ್ ಮೊದಲಾದವರು ಉಪಸ್ಥಿತರಿದ್ದರು. ಶ್ರೀಕಾಂತ್ ರಾವ್ ನಿವೃತ್ತ ಉಪನ್ಯಾಸಕರು ಸ್ವಾಗತಿಸಿದರು. ದೀಪಾ ಪೈ ತಂಡ ಪ್ರಾರ್ಥಿಸಿದರು. 


Aware others:

Leave a Reply

Your email address will not be published. Required fields are marked *

error: Content is protected !!