ಜುಲೈ 1: ಕುಂಭಾಶಿಯಲ್ಲಿ ಗಿಡ ವಿತರಣೆ ಹಾಗೂ ವನಮಹೋತ್ಸವ

ಕುಂದಾಪುರ: ಕೊರ್ಗಿ ವಿಠಲಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ (ರಿ.) ಕುಂಭಾಶಿ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಹಾಗೂ ರೋಟರಿ ಕ್ಲಬ್ ತೆಕ್ಕಟ್ಟೆ ಇವರ ಸಹಭಾಗಿತ್ವದಲ್ಲಿ ಜುಲೈ 1ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಆನೆಗುಡ್ಡೆ ಶ್ರೀ ವಿನಾಯಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂಭಾಶಿ ಇಲ್ಲಿ ಗಿಡ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕೊರ್ಗಿ ವಿಠಲಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ (ರಿ.) ಕುಂಭಾಶಿ ಇದರ ಪ್ರವರ್ತಕರಾದ ಕೊರ್ಗಿ ವಿಠಲ ಶೆಟ್ಟಿ ತಿಳಿಸಿದ್ದಾರೆ.
