ಕುಂದಾಪುರ: ಶ್ರೀ ನಾರಾಯಣಗುರು ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಂಗಳೂರು ಆಯ್ಕೆ
ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಯುವಕ ಮಂಡಲಗಳಲ್ಲಿ ಒಂದಾದ ಶ್ರೀ ನಾರಾಯಣಗುರು ಯುವಕ ಮಂಡಲ (ರಿ.) ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಹಂಗಳೂರು ಆಯ್ಕೆಯಾಗಿದ್ದಾರೆ.

ಯುವಕ ಮಂಡಲದ ಗೌರವ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಬೀಜಾಡಿ, ಉಪಾಧ್ಯಕ್ಷರುಗಳಾಗಿ ಗಣೇಶ ಪೂಜಾರಿ ಕೆಂಚನೂರು, ರಮೇಶ್ ಪೂಜಾರಿ ಮದ್ದುಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಪೂಜಾರಿ ಬೀಜಾಡಿ ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ನೇರಳಕಟ್ಟೆ, ಕೋಶಾಧಿಕಾರಿಯಾಗಿ ನಿತ್ಯಾನಂದ ಪೂಜಾರಿ ಆನಗಳ್ಳಿ ಜೊತೆ ಕೋಶಾಧಿಕಾರಿಯಾಗಿ ಸಂತೋಷ ಪೂಜಾರಿ ಕೋಣಿ ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿ ಕೋಟ್ಯಾನ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಆನಂದ ಪೂಜಾರಿ ಕೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ತೆಕ್ಕಟ್ಟೆ, ಜೊತೆ ಸಂಘಟನಾ ಕಾರ್ಯದರ್ಶಿಯಾಗಿ ಉದಯ.ಸಿ.ಕೆ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕಡ್ಗಿಮನೆ, ಜೊತೆ ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ವಿಘ್ನೇಶ್ ಪೂಜಾರಿ ಕುಂದಾಪುರ ಆಯ್ಕೆಯಾಗಿದ್ದಾರೆ.
