ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆ: ಬ್ರಹ್ಮಾವರ ಪೊಲೀಸ್ ಠಾಣೆ ಹಾಗೂ ಸುತ್ತಮುತ್ತ ಬಿಗು ಪೊಲೀಸ್ ಭದ್ರತೆ

ಕುಂದಾಪುರ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಇಂದು ಉಡುಪಿ ಪೊಲೀಸರು ತಿಮ್ಮರೋಡಿ ಮನೆಗೆ ಹೋಗಿ ಅಲ್ಲಿಂದ ಕರೆದುಕೊಂಡು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಮುತ್ತ ಭದ್ರತೆಯನ್ನು ಮಾಡಲಾಗಿತ್ತು.

ಇನ್ನೂ ವಿನಾ ಕಾರಣ ಪೊಲೀಸ್ ಠಾಣೆಗೆ ಬರುವಂತಿಲ್ಲ. ಪೊಲೀಸ್ ಠಾಣೆಯ ಸುತ್ತಮುತ್ತ ಯಾವುದೇ ವಾಹನ ನಿಲುಗಡೆಗೆ ಅವಕಾಶ ನೀಡಿಲ್ಲ. ಪೊಲೀಸ್ ಠಾಣೆಗೆ ಬರುವ ರಸ್ತೆಯಲ್ಲಿ ಹಾದು ಹೋಗುವ ವಾಹನಗಳನ್ನು ವಿಚಾರಣೆ ಮಾಡಿ ಕಳುಹಿಸಲಾಗುತ್ತಿತ್ತು.
