ಕುಂದಾಪುರ: ಯೋಗದಲ್ಲಿ ರಾಷ್ಟ್ಮಟ್ಟಕ್ಕೆ ಆಯ್ಕೆಯಾದ ಗುರುದಾಸ್ ಜಿ

ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ಆಗಸ್ಟ್ 22ರಿಂದ 24ರ ವರೆಗೆ ಚಿತ್ರದುರ್ಗದ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬ್ಬಂದಿ ಗುರುದಾಸ್ ಜಿ ರವರು ವಿವಿಧ ಹಂತದ ಸ್ಪರ್ದೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.