BlogCulturalEconomyEducationEntertainmentFashionHighlightsLifestyleLocal newsOthersState newsTop StoriesTrending

ವಿದ್ಯಾರಣ್ಯ ಅಂಗಳದಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ-ಸಡಗರ

Aware others:

ಪಿ.ಯು.ಸಿ. ಪ್ರಮುಖ ಘಟ್ಟ, ಕಲಿಕೆ ನಿರ್ಲಕ್ಷಿಸಬೇಡಿ- ವಿದ್ಯಾರ್ಥಿಗಳಿಗೆ ಡಾ. ರಮೇಶ್ ಶೆಟ್ಟಿ ಕಿವಿ ಮಾತು

ಕುಂದಾಪುರ: ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ನವೆಂಬರ್‌ 14ರಂದು ವಿದ್ಯಾರಣ್ಯದ ಅಂಗಳದಲ್ಲಿ ಸುಜ್ಞಾನ ಪಿ.ಯು. ಕಾಲೇಜು ಹಾಗೂ ವಿದ್ಯಾರಣ್ಯದ ವಿದ್ಯಾರ್ಥಿಗಳಿಗಾಗಿ ಅದ್ದೂರಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಪಿ.ಯು.ಸಿ. ಎನ್ನುವುದು ವಿದ್ಯಾರ್ಥಿಗಳ ಜೀವನದ ಅತ್ಯಂತ ಪ್ರಮುಖ ಘಟ್ಟ. ಹಾಗಾಗಿ ಕಲಿಕೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು ಎಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಂದು ಸುಂದರವಾದ ವ್ಯಕ್ತಿತ್ವವನ್ನು ಕಟ್ಟಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಸಂಸ್ಥೆಯ ಖಜಾಂಚಿ ಭರತ್‌ ಶೆಟ್ಟಿ ಮಾತನಾಡಿ, ಬದುಕಿನಲ್ಲಿ ಅವಕಾಶಗಳು ಮತ್ತೆ ಮತ್ತೆ ಸಿಗುವುದಿಲ್ಲ. ವಿದ್ಯಾರ್ಥಿ ಜೀವನವೆನ್ನುವುದು ಗೋಲ್ಡನ್‌‌ ಲೈಫ್. ಹಾಗಾಗಿ ಈ ಅಮೂಲ್ಯ ಸಮಯವನ್ನು ಎಂದಿಗೂ ವ್ಯರ್ಥ ಮಾಡಬಾರದು. ಕಲಿಕೆ ನಿರಂತರವಾಗಿರುತ್ತದೆ. ಜೀವನದಲ್ಲಿ ಮಹತ್ವಾಕಾಂಕ್ಷೆಯ ಕನಸು ಮತ್ತು ಸ್ಪಷ್ಟ ಗುರಿಗಳನ್ನು ಇಟ್ಟುಕೊಳ್ಳಿ. ಇದು ನಿಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಲು ಸಹಕಾರಿಯಾಗುತ್ತದೆ ಎಂದರು.

ಇದೇ ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಸುಜ್ಞಾನ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಗೂ ವಿದ್ಯಾರಣ್ಯದ ಚಿಣ್ಣರಿಗೆ ಪ್ರಶಸ್ತಿ ಫಲಕಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

ವೇದಿಕೆಯ ಮೇಲೆ ವಿದ್ಯಾರಣ್ಯದ ಮುಖ್ಯೋಪಾಧ್ಯಾಯ ಪ್ರದೀಪ್‌ .ಕೆ, ಹಾಗೂ ಸುಜ್ಞಾನ ಪಿ.ಯು. ಕಾಲೇಜಿನ ಪ್ರಾಂಶುಪಾಲ ರಂಜನ್‌ ಬಿ. ಶೆಟ್ಟಿ ಉಪಸ್ಥಿತರಿದ್ದರು. ಇಂಗ್ಲಿಷ್‌ ವಿಭಾಗದ ಮುಖ್ಯಸ್ಥ ವಿನಯ್‌ ಕುಮಾರ್‌ ಹಾಗೂ ದೀಕ್ಷಾ ಅನಿಲ್‌ ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!